dtvkannada

ಬೆಳ್ತಂಗಡಿ, ಅ.2: ಸಮಾಜದಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡಿ ದೇಶಕ್ಕೆ ಉತ್ತಮ ಪ್ರಜೆಗಳನ್ನಾಗಿ ರೂಪಿಸಿ ಹಲವಾರು ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ವಲಗೊಳಿಸುವ ಅತಿಥಿ ಶಿಕ್ಷಕರನ್ನು ಖಾಯಂ ಆಗಿ ನೇಮಕಾತಿ ಮಾಡಬೇಕು. ಮತ್ತು ತಕ್ಷಣವಾಗಿ ಬಾಕಿ ಇರುವ ವೇತನವನ್ನು ಪಾವತಿಸಿ, ಕೋವಿಡ್ ಪ್ಯಾಕಜ್ ಆಗಿ ಸೂಕ್ತ ಪರಿಹಾರ ಘೋಷಣೆ ಮಾಡಬೇಕು. ಸರ್ಕಾರವು ತಕ್ಷಣ ಅತಿಥಿ ಶಿಕ್ಷಕರ ಮನವಿಗೆ ಸ್ಪಂದನೆ ಮಾಡಬೇಕೆಂದು ಒತ್ತಾಯಿಸಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲೆ ವತಿಯಿಂದ ಬೆಳ್ತಂಗಡಿ ತಹಶೀಲ್ದಾರ್ ಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ಸಮಿತಿ ಸದಸ್ಯರಾದ ಸದಾಫ್ ಬೆಳ್ತಂಗಡಿ, ಸಹಲ್ ಉಜಿರೆ ಮತ್ತು ಸಫ್ವಾನ್ ಉಜಿರೆ ಉಪಸ್ಥಿತರಿದ್ದರು.

By dtv

Leave a Reply

Your email address will not be published. Required fields are marked *

error: Content is protected !!