dtvkannada

ಬೆಂಗಳೂರು: ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ 9 ತಿಂಗಳ ಮಗುವನ್ನು KMCC ಆಂಬ್ಯೂಲೆನ್ಸ್ ಮೂಲಕ ಝೀರೋ ಟ್ರಾಫಿಕ್’ನಲ್ಲಿ ಕೇರಳದ ಕಣ್ಣೂರಿನಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಇಂದು ರವಾನಿಸಲಾಗಿದೆ.

ಅಪರೂಪದ ಖಾಯಿಲೆಯಿಂದ ಬಳಲುತ್ತಿದ್ದ ಕೇರಳದ 9 ತಿಂಗಳ ಮಗು ಇನಾರ ಮರಿಯಂ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ರವಾನಿಸಬೇಕಿತ್ತು. ಕೇರಳದ ಕಣ್ಣೂರಿನಿಂದ ಕೇವಲ 6 ಗಂಟೆಯಲ್ಲಿ ಬೆಂಗಳೂರಿಗೆ ತಲುಪುವ ಅನಿವಾರ್ಯವಿತ್ತು. ಟ್ರಾಫಿಕ್ ಸಮಸ್ಯೆಯ ನಡುವೆ ಮಗುವನ್ನು ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ರೀಚ್ ಮಾಡುವುದು ಅಸಾಧ್ಯದ ಮಾತಾಗಿತ್ತು. ಆದ್ರೆ ಮಗುವಿನ ಜೀವ ಉಳಿಸಲು ಸಾರ್ವಜನಿಕರೇ ಸಾಥ್ ನೀಡಿದ್ದಾರೆ.

ಕೇರಳಿದಿಂದ ಮೈಸೂರು ಮೂಲಕ ಬೆಂಗಳೂರಿಗೆ ಹೊರಟಿದ್ದ ವಿಶೇಷ ಆಂಬುಲೆನ್ಸ್ ಹೋಗುವುದಕ್ಕೆ ರಸ್ತೆಯುದ್ದಕ್ಕೂ ಜನರಿಂದಲೇ ಝೀರೋ ಟ್ರಾಫಿಕ್ ವ್ಯವಸ್ಥೆಯಾಗಿದ್ದು, ಆಂಬುಲೆನ್ಸ್ ತೆರಳಲು ಸಾರ್ವಜನಿಕರ ಅಭೂತಪೂರ್ವ ಬೆಂಬಲ ನೀಡಿದ್ದಾರೆ.

ಇದರಿಂದ ಈಗ ಇನಾರ ಮರಿಯಂ ಸರಿಯಾದ ಸಮಯಕ್ಕೆ ಮಣಿಪಾಲ್ ಆಸ್ಪತ್ರೆಗೆ ರೀಚ್ ಆಗಿದ್ದಾರೆ. ಹೃದಯ ಗಟ್ಟಿ ಮಾಡಿ ಸರಿಯಾದ ಸಮಯಕ್ಕೆ ಮಗುವನ್ನು ಆಸ್ಪತ್ರೆಗೆ ರವಾನಿಸಿದ ಆಂಬುಲೆನ್ಸ್ ಚಾಲಕ ಹನೀಫ್ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದು ಸನ್ಮಾನ ಮಾಡಿ ಅಭಿನಂದಿಸಿದ್ದಾರೆ.

By dtv

Leave a Reply

Your email address will not be published. Required fields are marked *

error: Content is protected !!