ತಿಂಗಳಾಡಿ: ರಿಕ್ಷಾ ಮತ್ತು ಬೈಕ್ ನಡುವೆ ಮುಖಾಮುಖಿ ಅಪಘಾತ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ತಿಂಗಳಾಡಿ ಜಂಕ್ಷನ್ ನಲ್ಲಿ ನಡೆದಿದೆ.
ಕುಂಬ್ರದಿಂದ ಕೈಕಂಬ ಹೋಗುತ್ತಿದ್ದ ರಿಕ್ಷಾ ಮತ್ತು ಓಲೆಮುಂಡೋವಿನಿಂದ ತಿಂಗಳಾಡಿಗೆ ಬರುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಓಲೆಮುಂಡೋವು ನಿವಾಸಿ ಹನೀಫ್ ಎಂಬವರ ಪುತ್ರ ತೌಸೀಫ್ ಎಂಬವರಿಗೆ ಗಾಯವಾಗಿದೆ. ಬೈಕ್ ಸಹ ಸವಾರ ಮತ್ತು ಆಟೋ ಚಾಲಕನಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
![](http://dtvkannada.in/wp-content/uploads/2021/10/IMG-20211013-WA0060.jpg)
ಅಪಘಾತದ ತೀವ್ರತೆಗೆ ಬೈಕ್ ಸವಾರನ ತಲೆಯ ಭಾಗಕ್ಕೆ ಗಂಭೀರ ಗಾಯವಾಗಿದ್ದು, ವಿಪರೀತ ರಕ್ತಸ್ರಾವ ವಾದ ಕಾರಣ ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.