dtvkannada

'; } else { echo "Sorry! You are Blocked from seeing the Ads"; } ?>

ಚಿಕ್ಕಮಂಗಳೂರು: ಆಯುಧ ಪೂಜೆ, ವಿಜಯ ದಶಮಿ ಬೆನ್ನಲ್ಲೇ ವೀಕೆಂಡ್, ಹೀಗೆ ಸಾಲು ಸಾಲು ರಜೆಗಳ ಕಾರಣದಿಂದ ಜನರು ಪ್ರವಾಸಿ ಸ್ಥಳಗಳತ್ತ ಮುಖ ಮಾಡಿದ್ದಾರೆ. ಪ್ರವಾಸಿಗರ ನೆಚ್ಚಿನ ತಾಣ ಚಿಕ್ಕಮಗಳೂರಿನಲ್ಲಿ ಇಂದು ಪ್ರವಾಸಿಗರ ಸಂಖ್ಯೆ ಹೆಚ್ಚಿದ್ದು, ಬಹಳಷ್ಟು ಟ್ರಾಫಿಕ್ ಜಾಮ್ ಎದುರಾಗಿದೆ.

'; } else { echo "Sorry! You are Blocked from seeing the Ads"; } ?>

ಇದೇ ಸಂದರ್ಭ ಕೊಟ್ಟಿಗಹಾರ ಸಮೀಪದ “ದೇವರಮನೆ” ಎಂಬ ಪ್ರವಾಸಿ ಸ್ಥಳಕ್ಕೆ ಹೋಗುವ ಕಿರಿದಾದ ದಾರಿಯಲ್ಲಿ ಕಾರೊಂದು ಕೆಟ್ಟು ನಿಂತ ಕಾರಣ, ಎದುರಿನಿಂದ ಬಂದ ಬಸ್ಸ್ ಸೈಡ್ ಕೊಟ್ಟು ಸಾಗುವ ಭರದಲ್ಲಿ ರಸ್ತೆಬದಿಯ ಹೊಂಡಕ್ಕೆ ಬಿದ್ದು ರಸ್ತೆಯುದ್ದಕ್ಕೂ ಟ್ರಾಫಿಕ್ ಜಾಮ್ ಉಂಟಾಗಿದೆ.

ಆ ಸಂದರ್ಭದಲ್ಲಿ ಅದೇ ದಾರಿಯಿಂದಾಗಿ ಹೋದ ಪುತ್ತೂರಿನ ಯುವಕರ ತಂಡ ಧಾರಾಕಾರ ಮಳೆಯನ್ನು ಲೆಕ್ಕಿಸದೇ ಕಾರನ್ನು ರಸ್ತೆಬದಿಗೆ ತಳ್ಳಿ, ಇಕ್ಕಟ್ಟಿನಲ್ಲಿ ಸಿಲುಕಿದ್ದ ಬಸ್ಸ್ ಸುಗಮ ಸಂಚಾರವಾಗಲು ಅನುವು ಮಾಡಿಕೊಟ್ಟಿದ್ದಾರೆ. ಕರಾವಳಿಯ ಈ ಯುವಕರ ಕಾರ್ಯಕ್ಕೆ ಅಲ್ಲಿನ ಮಂದಿ ಮೆಚ್ಚುಗೆ ಸೂಚಿಸಿದ್ದು, ಮಳೆಯನ್ನು ಲೆಕ್ಕಿಸದೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಯುವಕರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!