dtvkannada

ಉಳ್ಳಾಲ: ಬಿಜೆಪಿ ಕಾರ್ಯಕರ್ತನ ಕೊಲೆಗೆ ಯತ್ನಿಸಿರುವ ಘಟನೆ ಕೊಣಾಜೆ ಸಮೀಪ ನಿನ್ನೆ ತಡರಾತ್ರಿ ನಡೆದಿದೆ. ಬಿಜೆಪಿ ಕಾರ್ಯಕರ್ತ, ಕೊಣಾಜೆ ಗ್ರಾ.ಪಂ ಮಾಜಿ ಸದಸ್ಯ ಪ್ರಕಾಶ್ ಶೆಟ್ಟಿ (38) ಎಂಬವರ ಕೊಲೆಗೆ ಯತ್ನಿಸಲಾಗಿದ್ದು, ಬೈಕಲ್ಲಿ ಬಂದ ಮೂವರು ಕೃತ್ಯ ಎಸಗಿರುವುದಾಗಿ ತಿಳಿದುಬಂದಿದೆ.

ಸ್ನೇಹಿತ ಮಂಜುನಾಥ್ ಜೊತಗೆ ಬೈಕಿನಲ್ಲಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಹಿಂಬದಿಯಿಂದ ಬಂದ ದುಷ್ಕರ್ಮಿಗಳು ತಲವಾರು ಬೀಸಿದ್ದಾರೆ. ಪವಾಡಸದೃಶವಾಗಿ ತಲವಾರು ದಾಳಿ ಏಟು ಕೈಗೆ ಮಾತ್ರ ಬಿದ್ದಿದೆ. ಗಾಯಾಳು ಪ್ರಕಾಶ್ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

By dtv

Leave a Reply

Your email address will not be published. Required fields are marked *

error: Content is protected !!