ಪುತ್ತೂರು: ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಒಬ್ಬರು ಗಂಭೀರ ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಕಬಕ ಜಂಕ್ಷನ್ ನಲ್ಲಿ ಇಂದು ರಾತ್ರಿ ನಡೆದಿದೆ.
ಪುತ್ತೂರು ನಿಂದ ವಿಟ್ಲ ಕಡೆ ಸಾಗುತ್ತಿದ್ದ ದ್ವಿಚಕ್ರ ವಾಹನ ಕಬಕ ಜಂಕ್ಷನ್ ತಲುಪಿದಾಗ ಹಠತ್ತಾಗಿ ಯಾರೋ ಒಬ್ಬರು ರಸ್ತೆ ದಾಟಿದ್ದು ಅವಘಡ ಸಂಭವಿಸಲು ಕಾರಣ ಎಂದು ತಿಳಿದು ಬಂದಿದೆ.
ದ್ವಿಚಕ್ರ ವಾಹನ ಸವಾರ ಮತ್ತು ಹಿಂಬದಿ ಸವಾರನಿಗೂ ಗಾಯಗಳಾಗಿದ್ದು ಆಸ್ಪತ್ರೆಗೆ ಸಾಗಿಸಲಾಗಿದೆ.
ಗಂಭೀರ ಗಾಯಗೊಂಡ ವ್ಯಕ್ತಿಯೊಬ್ಬರನ್ನು ನೌಫಲ್ ಎಂಬುವವರು ತಮ್ಮ ಕಾರಿನಲ್ಲಿ ಪುತ್ತೂರಿನ ಮಹಾವೀರ ಆಸ್ಪತ್ರೆಗೆ ಸೇರಿಸಿದ್ದಾರೆಂದು ತಿಳಿದು ಬಂದಿದೆ.
ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ
ಪುತ್ತೂರಿನಿಂದ ವಿಟ್ಲ ಕಡೆ ಸಾಗುತ್ತಿದ್ದ ಬೈಕ್