ಪುತ್ತೂರು : ವಿದ್ಯಾರ್ಥಿಗಳ ಮೇಲಿನ ಹಲ್ಲೆ ಪ್ರಕರಣ ಖಂಡನಾರ್ಹ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದವರನ್ನು ಕೂಡಲೇ ಬಂದಿಸಿ ತಕ್ಕ ಶಿಕ್ಷೆಯನ್ನು ನೀಡಿ. ಯಾರೆ ಆಗಿರಲಿ ಅಂತವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮವನ್ನು ಕೈಗೊಳ್ಳಬೇಕು ಇದೇ ರೀತಿ ಸಮಾಜ ಮುಂದುವರಿದರೆ ಮುಂದಿನ ದಿನಗಳಲ್ಲಿ ಶಾಂತಿ ನೆಲೆಸಲು ಖಂಡಿತ ಸಾಧ್ಯವಿಲ್ಲ ಈ ಕೂಡಲೆ ಪೊಲೀಸ್ ಇಲಾಖೆ ಪ್ರಕರಣವನ್ನು ದಾಖಲಿಸಿ ಇಂತಹವರಿಗೆ ಕಾನೂನಿನ ಮೂಲಕ ಪಾಠ ಕಲಿಸಬೇಕೆಂದು ಒಳಮೊಗ್ರು ಕಾಂಗ್ರೆಸ್ ಗ್ರಾಮ ಸಮಿತಿಯ ಪರವಾಗಿ ಕಾರ್ಯದರ್ಶಿಯಾದ ಸಲಾಂ ಕುಂಬ್ರವರು ಡಿಟಿವಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.