ಮಂಗಳೂರು: ಅಪ್ರಾಪ್ತ ವಯಸ್ಸಿನ ದಲಿತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಆರೋಪಿಯ ಅಪರಾಧ ಕೃತ್ಯ ಸಾಬೀತಾಗಿದೆ ಎ೦ದು ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಎಫ್ ಟಿಎಸ್ಸಿ-1 (ಪೋಕ್ಸೋ) ನ್ಯಾಯಾಲಯ ತೀರ್ಪು ನೀಡಿದೆ.
ಬೆಳ್ತಂಗಡಿ ತಾಲೂಕಿನ ನರಿಯ ಗ್ರಾಮದ ದಲಿತ ಸಮುದಾಯದ ಬಾಲಕಿಯೋರ್ವಳು ಶಾಲೆಯಿಂದ ಮನೆಗೆ ನಡೆದುಕೊಂಡು ಬರುತ್ತಿದ್ದಳು. 2015ರ ಫೆಬ್ರವರಿಯಲ್ಲಿ ಪಿ.ಜೆ.ಜೇಕಬ್ ವಿದ್ಯಾರ್ಥಿನಿಯನ್ನು ತಡೆದು ನಿಲ್ಲಿಸಿ ಬಲಾತ್ಕಾರವಾಗಿ ಮನೆಯೊಳಗೆ ಕರೆದುಕೊ೦ಡು ಹೋಗಿ ಅತ್ಯಾಚಾರವೆಸಗಿದ್ದ. ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ನದಿಗೆ ಹಾಕಿ ಕೊಲೆ ಮಾಡುವುದಾಗಿ ಬೆದರಿಸಿದ್ದ.
ಪರಿಣಾಮವಾಗಿ ಬಾಲಕಿ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ್ದಳು. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಡಿಎನ್ಎ ಪರೀಕ್ಷೆಯಲ್ಲಿ ಪಿ.ಜೆ.ಜೇಕಬ್ ಮೇಲಿನ ಆರೋಪ ದೃಢಪಟ್ಟಿತ್ತು. ಎಎಸ್ಪಿ ರಾಹುಲ್ ಕುಮಾರ್ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ನ್ಯಾಯಾಧೀಶರಾದ ಸಾವಿತ್ರಿ ವಿ.ಭಟ್ ಅವರು 14 ಸಾಕ್ಷಿಗಳನ್ನು ವಿಚಾರಣೆ ಮಾಡಿದ್ದು ಆರೋಪಿಯ ಅಪರಾಧಿ ಸಾಬೀತಾಗಿದೆ ಎಂದು ಅ.22ರಂದು ತೀರ್ಪು ನೀಡಿದ್ದಾರೆ. ಶಿಕ್ಷೆಯ ಪ್ರಮಾಣವನ್ನು ನಾಳೆ ಪ್ರಕಟಿಸುವ ಸಾಧ್ಯತೆ ಇದೆ.
ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ (ಪೋಕ್ಸೋ) ವೆಂಕಟರಮಣ ಸ್ವಾಮಿ ವಾದಿಸಿದರು.