ಮೈಸೂರು: ಮಳೆಯ ನೀರು ನೋಡುತ್ತಿದ್ದ ವ್ಯಕ್ತಿಯೊಬ್ಬರು ಕಾಲು ಜಾರಿ ಮೋರಿಯಲ್ಲಿ ಕೊಚ್ಚಿಹೋದ ದುರ್ಘಟನೆ ಭಾನುವಾರ ತಡರಾತ್ರಿ ಮೈಸೂರಿನ ಕಾರಂಜಿ ಕೆರೆಗೆ ಸಂಪರ್ಕ ಕಲ್ಪಿಸುವ ಕಾಲುವೆಯಲ್ಲಿ ನಡೆದಿದೆ.
ಸಿದ್ಧಾರ್ಥ ನಗರದ ವಿನಯ ಮಾರ್ಗದ ನಿವಾಸಿ ಎಂ.ಚಂದ್ರೇಗೌಡ (60 ವ) ನೀರಿನಲ್ಲಿ ಕೊಚ್ಚಿಹೋದ ವ್ಯಕ್ತಿ.
ಮನೆ ಪಕ್ಕದ ಮೋರಿಯಲ್ಲಿ ನಿಂತು ನೀರು ವೀಕ್ಷಣೆ ಮಾಡುತ್ತಿದ್ದ ಚಂದ್ರೇಗೌಡ ಕಾಲು ಜಾರಿ ಮೋರಿಗೆ ಬಿದ್ದಿದ್ದಾರೆ. ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾಗಿದ್ದಾರೆ. ಈ ವೇಳೆ ಅಗ್ನಿಶಾಮಕ ದಳದ ಸಿಬ್ಬಂದಿಗೆ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.
ಸುರಿಯುತ್ತಿದ್ದ ಮಳೆಯಲ್ಲೂ ಸಿಬ್ಬಂದಿ ಕಾರ್ಯಚರಣೆಗೆ ಮುಂದಾದರೂ ನೀರಿನಲ್ಲಿ ಕೊಚ್ಚಿಹೋದ ವ್ಯಕ್ತಿ ಸುಳಿವು ಸಿಕ್ಕಿಲ್ಲ.