ಉಪ್ಪಿನಂಗಡಿ: ಉಪ್ಪಿನಂಗಡಿ ಬಸ್ಸು ತಂಗುದಾಣದ ಸಮೀಪದ ಪಂಚಾಯತ್ ಬಿಲ್ಡಿಂಗ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಮೃತ ದೇಹ ಪತ್ತೆಯಾಗಿದೆ.
![](http://dtvkannada.in/wp-content/uploads/2021/10/IMG-20211027-WA0010-768x1024.jpg)
ಸಾವಿಗೆ ಕಾರಣ ತಿಳಿದು ಬಂದಿಲ್ಲ. ಮೃತ ವ್ಯಕ್ತಿಯನ್ನು ಉಪ್ಪಿನಂಗಡಿ ಸಮೀಪದ ಕಾಂಚನ ನಿವಾಸಿ ರಾಮಣ್ಣ ಪೂಜಾರಿ ಎಂದು ಗುರುತಿಸಲಾಗಿದ್ದು ಮೃತ ದೇಹವೂ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಹತ್ಯೆಯೋ ಆತ್ಮಹತ್ಯೆಯೋ ಎಂದು ಪೊಲೀಸರ ತನಿಖೆಯಿಂದ ಇನ್ನಷ್ಟೇ ತಿಳಿಯಬೇಕಾಗಿದೆ.