dtvkannada

ಪುತ್ತೂರು: ಅ.30ರಂದು ಸಂಜೆ ಒಳಮೊಗ್ರು ಗ್ರಾಮದ ದರ್ಬೆತ್ತಡ್ಕದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದು. ದರ್ಬೆತ್ತಡ್ಕ ನಿವಾಸಿ ಕೃಷಿಕ ಪುರುಷೋತ್ತಮ ಪೂಜಾರಿ (47ವ)ರವರು ಮೃತಪಟ್ಟ ವ್ಯಕ್ತಿ.

ಇವರು ನಿನ್ನೆ ಸಂಜೆ ಮನೆಯೊಳಗಿದ್ದ ವೇಳೆ ಸಿಡಿಲು ಬಡಿದು ಅಸ್ವಸ್ಥಗೊಂಡಿದ್ದು ತಕ್ಷಣ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು ಆದರೆ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರೆಂದು ತಿಳಿದು ಬಂದಿದೆ.

ಸುಳ್ಯದವರಾಗಿರುವ ಪುರುಷೋತ್ತಮ ಪೂಜಾರಿ ಅವರು ದರ್ಬೆತಡ್ಕದಿಂದ ಹಲವು ವರ್ಷಗಳ ಹಿಂದೆ ವಿವಾಹವಾಗಿದ್ದರು ಈದೀಗ ಮೃತರು ಪತ್ನಿ ಗೀತಾ, ಪುತ್ರಿ ಬಬಿತಾ ಅವರನ್ನು ಅಗಲಿದ್ದಾರೆ.

By dtv

Leave a Reply

Your email address will not be published. Required fields are marked *

error: Content is protected !!