dtvkannada

ಕೊಣಾಜೆ: ಮಂಗಳೂರಿನಲ್ಲಿ ಭಾನುವಾರ ಸಂಜೆಯಿಂದ ಗುಡುಗು, ಸಿಡಿಲು ಸಹಿತ ವಿಪರೀತ ಮಳೆಯಾಗುತ್ತಿದ್ದು, ತೋಟದಿಂದ ಮನೆಗೆ ಬರುತ್ತಿದ್ದ ಯುವಕ ಸಿಡಿಲು ಬಡಿದು ದಾರುಣ ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ.

ಮೃತ ಯುವಕನನ್ನು ಹರೇಕಳ ನಿವಾಸಿ ಹಸನಬ್ಬ ಎಂಬವರ ಪುತ್ರ ಅಬ್ದುಲ್ ರಹ್ಮಾನ್(33) ಎಂದು ತಿಳಿದು ಬಂದಿದೆ.

ಮೃತ ದುರ್ದೈವಿ ರಹ್ಮಾನ್ ರವರು ತೋಟದಲ್ಲಿ ಕಟ್ಟಿದ್ದ ದನವನ್ನು ಮನೆಯತ್ತ ಕರೆದುಕೊಂಡು ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಸಿಡಿಲು ಬಡಿದು ಸ್ಥಳದಲ್ಲೇ ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಿದಾದರೂ, ದಾರಿ ಮದ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಮೃತರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

By dtv

Leave a Reply

Your email address will not be published. Required fields are marked *

error: Content is protected !!