ವಿಜಯಪುರ: ಸಿಂದಗಿ ಅಸೆಂಬ್ಲಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಜಯಭೇರಿ ಬಾರಿಸಿದ್ದಾರೆ, ಅಧಿಕೃತ ಘೋಷಣೆಯಷ್ಟೇ ಬಾಕಿಯಿದೆ. 36 ವರ್ಷದ ರಮೇಶ್ ಭೂಸನೂರ ಅವರ ಪರ ಕಾರ್ಯಕರ್ತರು ಘೋಷಣೆ ಕೂಗಿ, ಜಯಕಾರ ಹಾಕುತ್ತಿದ್ದಾರೆ.
ತೀವ್ರ ಪೈಪೋಟಿ ನೀಡಿದ್ದ ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ ಠೇವಣಿಯನ್ನೂ ವಾಪಸ್ ಗಳಿಸದೆ, ಸೋಲನ್ನೊಪ್ಪಿದ್ದಾರೆ. ತೀವ್ರ ಜಿದ್ದಾಜಿದ್ದಿಯಿಂದ ಕೂಡಿದ್ದ ಫಲಿತಾಂಶದಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷದ ಅಭ್ಯರ್ಥಿ ರಮೇಶ್ ಭೂಸನೂರ ಸಮಾಧಾನಕರ ಅಂತರದಲ್ಲಿ ಗೆದ್ದಿದ್ದಾರೆ.
ಕರ್ನಾಟಕ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 30 ರಂದು ಉಪಚುನಾವಣೆ ನಡೆದಿತ್ತು.