ಸುಳ್ಯ: ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬನಿಗೆ ಕರೆಂಟ್ ಶಾಕ್ ಹೊಡೆದು ಮೃತಪಟ್ಟ ಘಟನೆ ದೇವಚಳ್ಳ ಗ್ರಾಮದ ಕರಂಗಲ್ಲಿ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ.
ಮೃತ ವ್ಯಕ್ತಿಯನ್ನು ಪ್ರಕಾಶ್ ಎಂದು ಗುರುತಿಸಲಾಗಿದೆ.ಕರಂಗಲ್ಲಿನ ಪ್ರಕಾಶ್ ಎಂಬವರು ಗೆಳೆಯನೊಂದಿಗೆ ಸೇರಿ ಬ್ಯಾಟರಿ ಬಳಸಿ ಮೀನು ಹಿಡಿಯುತ್ತಿರುವ ವೇಳೆ ಇನ್ವರ್ಟರ್ ಬ್ಯಾಟರಿಯಲ್ಲಿ ವಿದ್ಯುತ್ ಪ್ರವಹಿಸಿ ಪ್ರಕಾಶ್ ಮೃತರಾಗಿರುವುದಾಗಿ ತಿಳಿದು ಬಂದಿದೆ.