dtvkannada

'; } else { echo "Sorry! You are Blocked from seeing the Ads"; } ?>

ಉಡುಪಿ: ಸ್ಕೂಟರ್‌ಗೆ ಹಿಂಬದಿಯಿಂದ ಲಾರಿ ಢಿಕ್ಕಿ ಹೊಡೆದು 8 ವರ್ಷದ ಬಾಲಕಿ ಅದೇ ಲಾರಿಯಡಿ ಬಿದ್ದು ಸ್ಥಳದಲ್ಲೇ ದಾರುಣ ಸಾವನ್ನಪ್ಪಿದ ಘಟನೆ ನಿನ್ನೆ ಉಡುಪಿ ಅಂಬಾಗಿಲು ಬಳಿಯ ನಾರಾಯಣ ನಗರ ಎಂಬಲ್ಲಿ ನಡೆದಿದೆ.

ಮೃತ ಬಾಲಕಿಯನ್ನು ಪ್ರಣಮ್ಯ ಜಿ ನಾಯಕ್(8) ಎಂದು ಗುರುತಿಸಲಾಗಿದೆ.

'; } else { echo "Sorry! You are Blocked from seeing the Ads"; } ?>

ಘಟನೆ ಹಿನ್ನೆಲೆ:
ನಿನ್ನ ಸಂಜೆ 4 ಗಂಟೆ ಸುಮಾರಿಗೆ ಸ್ಕೂಟರ್ ನಲ್ಲಿ ದಿವ್ಯಾ ಜಿ ನಾಯಕ್ ಮಗಳು ಪ್ರಣಮ್ಯ ಜಿ ನಾಯಕ್ ಅವರನ್ನು ಹಿಂಬದಿಯಲ್ಲಿ ಕುಳ್ಳಿರಿಸಿಕೊಂಡು ಸಂತೆಕಟ್ಟೆ ಕಡೆಯಿಂದ ಉಡುಪಿ ಕಡೆಗೆ ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ಬರುತ್ತಿದ್ದರು.

ಅಂಬಾಗಿಲು ಬಳಿಯ ನಾರಾಯಣ ನಗರ ರಸ್ತೆಯ ಜಂಕ್ಷನ್ ನನ್ನು ತಲುಪುವಾಗ ಸಂತೆಕಟ್ಟೆ ಕಡೆಯಿಂದ ಉಡುಪಿ ಕಡೆಗೆ ಟ್ರಾನ್ಸಿಟ್ ಮಿಕ್ಸರ್ ಲಾರಿ ಸ್ಕೂಟರಿನ ಬಲಬದಿಗೆ ಏಕಾಏಕಿ ಡಿಕ್ಕಿ ಹೊಡೆದಿದೆ.

'; } else { echo "Sorry! You are Blocked from seeing the Ads"; } ?>

ಪರಿಣಾಮ ಸ್ಕೂಟರಿನಲ್ಲಿದ್ದ ದಿವ್ಯಾ ಹಾಗೂ ಸಹಸವಾರೆ ಮಗಳು ಪ್ರಣಮ್ಯ ರಸ್ತೆಗೆ ಬಿದ್ದಿದ್ದಾರೆ.
ಈ ವೇಳೆ ಪ್ರಣಮ್ಯ ದೇಹದ ಮೇಲೆ ಅದೇ ಲಾರಿಯ ಚಕ್ರವು ಹರಿದು ಹೋಗಿ ಮಗುವಿನ ತಲೆ, ಹೊಟ್ಟೆ ಮತ್ತು ಕಾಲಿನ ಮೇಲಿನ ಚರ್ಮ ಹರಿದು ಹೋಗಿ ಛಿದ್ರವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ.

ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!