dtvkannada

ಪುತ್ತೂರು: ಕೇರಳಕ್ಕೆ ಅಕ್ರಮವಾಗಿ 2 ಲೀಟರ್ ಶ್ರೀ ಗಂಧದ ಎಣ್ಣೆ ಸಾಗಾಟ ಮಾಡುತ್ತಿದ್ದ ಪ್ರಕರಣದಲ್ಲಿ ತಲೆಮರೆಯಿಕೊಂಡ ಆರೋಪಿಯನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ ಘಟನೆ ನಿನ್ನೆ ನಡೆದಿದೆ. ಆರೋಪಿಯನ್ನು ಕಾಸರಗೋಡು, ಕೊಲ್ಲಂಬಾಡಿ ನಿವಾಸಿ ಮಹಮ್ಮದ್ ರಫೀಕ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಕೇರಳ ರಾಜ್ಯದ ಕಣ್ಣೂರಿನಲ್ಲಿ ಪತ್ತೆ ಮಾಡಲಾಗಿದೆ.

ಆರೋಪಿ ಪುತ್ತೂರು ಗ್ರಾಮಾಂತರ ಠಾಣಾ ಅ.ಕ್ರ 24/2006 ಕಲಂ 87, 71 (ಎ) ಕೆ.ಎಫ್ ಆಕ್ಟ್ ಪ್ರಕರಣದಲ್ಲಿ ಪುತ್ತೂರಿನಿಂದ ಕೇರಳ ರಾಜ್ಯಕ್ಕೆ ಅಕ್ರಮವಾಗಿ ಸುಮಾರು 2 ಲೀಟರ್ ಶ್ರೀಗಂಧದ ಎಣ್ಣೆಯನ್ನು ಸಾಗಾಟ ಮಾಡುತ್ತಿದ್ದ ಪ್ರಕರಣದಲ್ಲಿ ಬಂಧಿತನಾಗಿ ಮಾನ್ಯ ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಗೊಂಡ ನಂತರ, ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಸುಮಾರು 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

ಈತನ ಪತ್ತೆ ಬಗ್ಗೆ ಡಾ| ಗಾನಾ ಪಿ. ಕುಮಾರ್, ಪೊಲೀಸ್ ಉಪಾಧೀಕ್ಷಕರು ಪುತ್ತೂರು ಉಪ ವಿಭಾಗರವರು ಹಾಗೂ ಉಮೇಶ್ ಉಪ್ಪಳಿಕೆ, ವೃತ್ತ ನಿರೀಕ್ಷಕರು, ಪುತ್ತೂರು ಗ್ರಾಮಾಂತರ ರವರ ಮಾರ್ಗದರ್ಶನದಂತೆ ಠಾಣಾ ಉಪನಿರೀಕ್ಷಕರುಗಳಾದ ಶ್ರೀ ಉದಯರವಿ.ಎಂ.ವೈ, ಮತ್ತು ಶ್ರೀ ಅಮೀನಸಾಬ ಎಮ್ ಅತ್ತಾರ ಹಾಗೂ ಸಿಬ್ಬಂದಿಗಳಾದ ಹೆಚ್ ಸಿ ಅದ್ರಾಮ್, ಮತ್ತು ಪ್ರವೀಣ್,ರೈ ರವರು ಪತ್ತೆ ಹಚ್ಚುವಲ್ಲಿ ಸಹಕರಿಸಿದರು.ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ

By dtv

Leave a Reply

Your email address will not be published. Required fields are marked *

error: Content is protected !!