';
}
else
{
echo "Sorry! You are Blocked from seeing the Ads";
}
?>
ಉಪ್ಪಿನಂಗಡಿ: ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದ್ದು, ಘಟನೆಗೆ ಕಾರಣನಾದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಪ್ರೌಢಶಾಲೆಯೊಂದರಲ್ಲಿ ಪ್ರಸಕ್ತ ಹತ್ತನೇ ತರಗತಿ ಕಲಿಯುತ್ತಿರುವ ಈ ವಿದ್ಯಾರ್ಥಿನಿಯ ಉದರದಲ್ಲಿ ಗೆಡ್ಡೆ ಬೆಳೆದಿದೆ ಎಂದು ತಿಳಿದು ಹೆತ್ತವರು ಆಸ್ಪತ್ರೆಗೆ ದಾಖಲಿಸಿದಾಗ ಆಕೆ ತುಂಬು ಗರ್ಭವತಿಯಾಗಿರುವುದು ಬೆಳಕಿಗೆ ಬಂದಿತ್ತು.ಆಕೆ ಮಂಗಳೂರು ಪರಿಸರದ ಆಸ್ಪತ್ರೆಯೊಂದರಲ್ಲಿ ಗುರುವಾರ ಸಹಜ ಹೆರಿಗೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಆಸ್ಪತ್ರೆಯ ವೈದ್ಯಾಧಿಕಾರಿಗಳು ಪ್ರಕರಣವನ್ನು ಉಪ್ಪಿನಂಗಡಿ ಪೊಲೀಸರ ಗಮನಕ್ಕೆ ತಂದಿದ್ದರು.
';
}
else
{
echo "Sorry! You are Blocked from seeing the Ads";
}
?>
ಈ ಬಗ್ಗೆ ವಿದ್ಯಾರ್ಥಿನಿಯನ್ನು ವಿಚಾರಿಸಿದಾಗ ಹಿರೆಬಂಡಾಡಿ ಗ್ರಾಮದ ಮದ್ಮೆತ್ತಿಮಾರು ಮನೆ ನಿವಾಸಿ ಕೇಶವ (34 ವ) ತನ್ನನ್ನು ಅತ್ಯಾಚಾರವೆಸಗಿರುವುದನ್ನು ತಿಳಿಸಿದ್ದಾಳೆ.ಈ ಹಿನ್ನೆಲೆಯಲ್ಲಿ ಅವಿವಾಹಿತ ಕೇಶವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕೇಶವನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಅಪ್ರಾಪ್ತೆಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವ್ಯಕ್ತಿಯೋರ್ವರನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ಪುತ್ತೂರು ಸರಕಾರಿ ಬಸ್ ನಿಲ್ದಾಣದ ಬಳಿ ಹಾಡುಹಗಲೇ ನಡೆದಿದೆ. ಆರೋಪಿಯನ್ನು ನೌಫಲ್ (28) ಎಂದು ಗುರುತಿಸಲಾಗಿದೆ. ಗದಗ ಮೂಲದ ಹಿಂದೂ ಅಪ್ರಾಪ್ತ ಬಾಲಕಿ ಬಸ್ ನಿಲ್ದಾಣದ ಬಳಿ ಇದ್ದ ಸಂದರ್ಭದಲ್ಲಿ ಉಪ್ಪಿನಂಗಡಿ ಸಮೀಪದ ಸರಳೀಕಟ್ಟೆ ನಿವಾಸಿ ನೌಫಲ್ ಎಂಬಾತ ಬಾಲಕಿಯ ಬಳಿ ಬಂದು ಹತ್ತು ನಿಮಿಷ ನನ್ನ ಜೊತೆ ಬರ್ತಿಯಾ, ನಾನು ನಿನಗೆ…
ಚೆನ್ನೈ: 17 ವರ್ಷದ ಹುಡುಗಿಯ ಮೇಲೆ ಅತ್ಯಾಚಾರ ಎಸಗಿ, ಆಕೆ ಗರ್ಭವತಿಯಾಗಲು ಕಾರಣನಾದ 12 ವರ್ಷದ ಬಾಲಕನನ್ನು ತಮಿಳುನಾಡಿನ ತಂಜಾವೂರಿನ ಮಹಿಳಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. 17 ವರ್ಷದ ಹುಡುಗಿ ಮಗುವಿಗೆ ಜನ್ಮ ನೀಡಿರುವುದಾಗಿ ಆಂಗ್ಲ ದೈನಿಕವೊಂದು ವರದಿ ಮಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆಯ ಹೇಳಿಕೆ ಆಧಾರದ ಮೇಲೆ ಬಾಲಕನನ್ನು ಬಂಧಿಸಿದ ಹೊರತಾಗಿಯೂ, ಈ ಪ್ರಕರಣದಲ್ಲಿ ಹುಡುಗನನ್ನು…
ಬಂಟ್ವಾಳ: ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ತೆರಳಲೆಂದು 108 ಅಂಬ್ಯುಲೆನ್ಸ್ ವಾಹನದಲ್ಲಿ ಮಂಗಳೂರಿಗೆ ಹೋಗುವ ವೇಳೆ ದಾರಿ ಮಧ್ಯೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಮಂಗಳೂರು ಹೊರವಲಯದ ಪಡೀಲ್ ನ ಅಡ್ಯಾರ್ ಕಣ್ಣೂರು ಬಳಿ ನಡೆದಿದೆ. ವೇಣೂರು ನಿವಾಸಿ ರಮೇಶ್ ಅವರ ಪತ್ನಿ ಗೌರಮ್ಮ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆಯಾಗಿದ್ದಾರೆ. ಗೌರಮ್ಮನವರಿಗೆ ಇಂದು ಬೆಳಗ್ಗೆ ಹೆರಿಗೆ ನೋವು ಉಂಟಾದ ಹಿನ್ನೆಲೆ ಡೆಲಿವರಿಗೆಂದು ಬೆಳ್ತಂಗಡಿಯಿಂದ ಒಮ್ನಿ…