ಬಂಟ್ವಾಳ: ಪಾಣೆಮಂಗಳೂರು ನೇತ್ರಾವತಿ ಸೇತುವೆಯಿಂದ ಮಹಿಳೆಯೋರ್ವಳು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಇಂದು ಬೆಳಿಗ್ಗೆ ಸುಮಾರು 10 ಗಂಟೆಯ ವೇಳೆ ಗೆ ನೇತ್ರಾವತಿ ಸೇತುವೆಯಿಂದ ಮಹಿಳೆಯೊರ್ವಳು ಹಾರಿದ್ದನ್ನು ವಾಹನ ಸವಾರರು ನೋಡಿ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ ಎನ್ನಲಾಗಿದೆ.
ವಿಷಯ ತಿಳಿದ ಕೂಡಲೇ ಸ್ಥಳೀಯ ಮುಳುಗುಗಾರರು ದೋಣಿಯ ಮೂಲಕ ನೇತ್ರಾವತಿ ಸೇತುವೆಯ ಬಳಿಗೆ ಬಂದರೂ ಅದಾಗಲೇ ಮಹಿಳೆ ನೀರಿನಲ್ಲಿ ಮುಳುಗಿ ಕೊಚ್ಚಿಕೊಂಡು ಹೋಗಿದ್ದಾರೆ ಎಂಬ ಮಾಹಿತಿ ಸ್ಥಳೀಯರಿಂದ ದೊರಕಿದೆ. ಇಂದು ನದಿಗೆ ಹಾರಿ ನಾಪತ್ತೆಯಾದ ಮಹಿಳೆ ಯಾರು ಎಂಬ ಮಾಹಿತಿ ಇನ್ನೂ ಕೂಡ ಲಭ್ಯವಾಗಿಲ್ಲ.
ಘಟನೆ ನಡೆದ ಬಳಿಕ ಕೆಲ ಹೊತ್ತು ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡಚಣೆಯಾಗಿತ್ತು ಎಂದು ತಿಳಿಯಲಾಗಿದೆ .ಬಂಟ್ವಾಳ ಪೊಲೀಸರು ಘಟನೆ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.