dtvkannada

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು ಹೊಸದಾಗಿ 315 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,95,600 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,198 ಜನ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 152 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಸದ್ಯ ಬೆಂಗಳೂರಲ್ಲಿ 5,287 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

https://twitter.com/DHFWKA/status/1464941680641990656?

ವೈರಸ್ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದಲ್ಲಿ ಈಗಾಗಲೇ ಕಟ್ಟೆಚ್ಚರ ವಹಿಸಲಾಗಿದೆ. ‘ಕೇರಳ, ಮಹಾರಾಷ್ಟ್ರದಿಂದ ಬರುವವರು 72 ಗಂಟೆಗಳ ಅವಧಿ ಮೀರಿರದ ಕೋವಿಡ್ ಆರ್‌ಟಿ–ಪಿಸಿಆರ್ ನೆಗೆಟಿವ್ ವರದಿಯನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು. ಕಳೆದ 15 ದಿನಗಳ ಅವಧಿಯಲ್ಲಿ ಕೇರಳದಿಂದ ಬಂದಿರುವ ವಿದ್ಯಾರ್ಥಿಗಳು ಕೋವಿಡ್ ಪರೀಕ್ಷೆಗೆ ಒಳಪಡಬೇಕು. ಅಲ್ಲಿಂದ ಈಗ ಬಂದ ವಿದ್ಯಾರ್ಥಿಗಳಿಗೆ 7 ದಿನಗಳ ಬಳಿಕ ಮತ್ತೊಮ್ಮೆ ಆರ್‌ಟಿ–ಪಿಸಿಆರ್ ಪರೀಕ್ಷೆ ನಡೆಸಬೇಕು. ಅಧಿಕ ಕೋವಿಡ್ ಪ್ರಕರಣಗಳು ಪತ್ತೆಯಾದ ಶಿಕ್ಷಣ ಸಂಸ್ಥೆಗಳಲ್ಲಿ ಸೋಂಕಿತರಾಗಿರದ ವಿದ್ಯಾರ್ಥಿಗಳನ್ನೂ ಕ್ವಾರಂಟೈನ್‌ಗೆ ಒಳಪಡಿಸಿ, 7 ದಿನಗಳ ಬಳಿಕ ಮತ್ತೊಮ್ಮೆ ‍ಪರೀಕ್ಷೆ ನಡೆಸಬೇಕು’ ಎಂದು ಸೂಚಿಸಿದ್ದಾರೆ. 

‘ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ, ಕೊಡಗು, ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಯಲ್ಲಿ ನಿರ್ಮಿಸಲಾಗಿರುವ ಚೆಕ್‌ಪೋಸ್ಟ್‌ಗಳಲ್ಲಿ ಎಲ್ಲರನ್ನೂ ಕಟ್ಟುನಿಟ್ಟಾಗಿ ತಪಾಸಣೆ ನಡೆಸಬೇಕು. ಶಿಕ್ಷಣ, ವ್ಯಾಪಾರ– ವ್ಯವಹಾರದ ಸಂಬಂಧ ಕೇರಳದಿಂದ ಇಲ್ಲಿಗೆ ಪ್ರತಿನಿತ್ಯ ಬರುವವರು ಕೋವಿಡ್‌ ಆರ್‌ಟಿ– ಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ಹೊಂದಿರಬೇಕು. ಒಮ್ಮೆ ನಡೆಸಲಾದ ಪರೀಕ್ಷೆಯ ವರದಿಯನ್ನು 14 ದಿನಗಳವರೆಗೆ ಗಡಿಯಲ್ಲಿ ಹಾಜರುಪಡಿಸಬಹುದು’ ಎಂದು ಹೇಳಿದ್ದಾರೆ.

ಶಾಲಾ–ಕಾಲೇಜುಗಳ ಕಾರ್ಯಕ್ರಮಗಳಿಗೆ ಬ್ರೇಕ್..!
ಬೆಂಗಳೂರು ಸೇರಿದಂತೆ ವಿವಿಧೆಡೆ ಕೆಲ ಶಿಕ್ಷಣ ಸಂಸ್ಥೆಗಳಲ್ಲಿ ಕೋವಿಡ್ ಪ್ರಕರಣಗಳು ಕಾಣಿಸಿಕೊಂಡಿರುವುದರಿಂದ ಸಾಂಸ್ಕೃತಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳನ್ನು ಶಾಲಾ– ಕಾಲೇಜುಗಳಲ್ಲಿ ಮುಂದೂಡುವಂತೆ ಆರೋಗ್ಯ ಇಲಾಖೆ ಸೂಚಿಸಿದೆ.

By dtv

Leave a Reply

Your email address will not be published. Required fields are marked *

error: Content is protected !!