dtvkannada

ಉಪ್ಪಿನಂಗಡಿ: ನಿನ್ನೆ ಉಪ್ಪಿನಂಗಡಿ ಸಮೀಪದ ಮಠ ಎಂಬಲ್ಲಿ ರಿಕ್ಷಾ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಮಗುವೊಂದು ಮೃತಪಟ್ಟ ಬೆನ್ನಲ್ಲೇ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿದ್ದ ಮಹಿಳೆ ಖದೀಜಾ ಚಿಕಿತ್ಸೆ ಫಲಕಾರಿಯಾಗದೆ ಇದೀಗ ಮೃತಪಟ್ಟಿದ್ದಾರೆ.

ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಠ ಮಸೀದಿ ಬಳಿ ಲಾರಿ ಮತ್ತು ರಿಕ್ಷಾ ಡಿಕ್ಕಿ ಹೊಡೆದಿದ್ದು ರಿಕ್ಷಾದಲ್ಲಿದ್ದ ಮಗು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರ ಗಾಯಗೊಂಡಿದ್ದರು.
ಗಾಯಾಳುಗಳಲ್ಲಿ ನಿನ್ನೆ ಮರಣ ಹೊಂದಿದ 12 ವರ್ಷದ ಬಾಲಕ ಅಲ್ತಾಫ್ ರವರ ತಾಯಿ ಖದೀಜಾ ಕೂಡ ಇದೀಗ ಮಂಗಳೂರು ಖಾಸಾಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಮತ್ತೊಬ್ಬ ಮಗ ಸಹಿತ ರಿಕ್ಷಾ ಚಾಲಕ ಮಂಗಳೂರು ಆಸ್ಪತ್ರೆಯಲ್ಲಿ ಚಿಂತಾಜನಕದಲ್ಲಿದ್ದಾರೆ ಎಂದು ತಿಳಿದು ಬಂದಿದೆ.

By dtv

Leave a Reply

Your email address will not be published. Required fields are marked *

error: Content is protected !!