';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಪುತ್ತೂರು ತಾಲೂಕಿನ ಮಾಜಿ ಶಾಸಕ, ಬಿಜೆಪಿ ಭೀಷ್ಮ ಉರಿಮಜಲು ಕೆ ರಾಮ್ ಭಟ್ (92) ವಯೋಸಹಜ ಕಾಯಿಲೆಯಿಂದ ನಿನ್ನೆ ರಾತ್ರಿ ಇಹಲೋಕ ತ್ಯಜಿಸಿದ್ದಾರೆ.
ಮಾಜಿ ಶಾಸಕರ ಸುದ್ದಿ ತಿಳಿದ ತಕ್ಷಣ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್, ಸಚಿವ ಎಸ್.ಅಂಗಾರ, ಪುತ್ತೂರು ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೆಲವು ದಿನದ ಹಿಂದೆಯಷ್ಟೇ ಅಲ್ಪ ಚೇತರಿಸಿಕೊಂಡು ಮನೆಗೆ ಬಂದಿದ್ದರು. ಆದರೆ ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ.
7 ಬಾರಿ ಪುತ್ತೂರು ವಿಧಾನ ಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದ ಅವರು 1977 ಹಾಗೂ 1983 ರಲ್ಲಿ ಗೆದ್ದು ಶಾಸಕರಾಗಿದ್ದರು . 1957 ರಲ್ಲಿ ಮೊದಲ ಬಾರಿ ಜನ ಸಂಘದ ಅಡಿಯಲ್ಲಿ ಚುನಾವಣೆ ಸ್ಪರ್ಧಿಸಿದ್ದರೆ 1985 ರಲ್ಲಿ ಕೊನೆಯ ಬಾರಿ ಬಿಜೆಪಿ ಚಿಹ್ನೆಯಡಿ ಸ್ಪರ್ದಿಸಿದ್ದರು.
ಪ್ರದಾನಿ ಮೋದಿ ಸಂತಾಪ:
';
}
else
{
echo "Sorry! You are Blocked from seeing the Ads";
}
?>
In the history of the Jana Sangh and BJP, stalwarts like Urimajalu K. Rama Bhat Ji have a special place. He assiduously worked to strengthen our Party in Karnataka and served tirelessly among people. I am saddened by his demise. Condolences to his family. Om Shanti.