ಪುತ್ತೂರು: ಪುತ್ತೂರು ತಾಲೂಕಿನ ಮಾಜಿ ಶಾಸಕ, ಬಿಜೆಪಿ ಭೀಷ್ಮ ಉರಿಮಜಲು ಕೆ ರಾಮ್ ಭಟ್ (92) ವಯೋಸಹಜ ಕಾಯಿಲೆಯಿಂದ ನಿನ್ನೆ ರಾತ್ರಿ ಇಹಲೋಕ ತ್ಯಜಿಸಿದ್ದಾರೆ.
![](http://dtvkannada.in/wp-content/uploads/2021/12/IMG-20211207-WA0010.jpg)
ಮಾಜಿ ಶಾಸಕರ ಸುದ್ದಿ ತಿಳಿದ ತಕ್ಷಣ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್, ಸಚಿವ ಎಸ್.ಅಂಗಾರ, ಪುತ್ತೂರು ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ.
![](http://dtvkannada.in/wp-content/uploads/2021/12/IMG-20211207-WA0013.jpg)
![](http://dtvkannada.in/wp-content/uploads/2021/12/IMG-20211207-WA0012.jpg)
![](http://dtvkannada.in/wp-content/uploads/2021/12/IMG-20211207-WA0011.jpg)
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೆಲವು ದಿನದ ಹಿಂದೆಯಷ್ಟೇ ಅಲ್ಪ ಚೇತರಿಸಿಕೊಂಡು ಮನೆಗೆ ಬಂದಿದ್ದರು. ಆದರೆ ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ.
7 ಬಾರಿ ಪುತ್ತೂರು ವಿಧಾನ ಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದ ಅವರು 1977 ಹಾಗೂ 1983 ರಲ್ಲಿ ಗೆದ್ದು ಶಾಸಕರಾಗಿದ್ದರು . 1957 ರಲ್ಲಿ ಮೊದಲ ಬಾರಿ ಜನ ಸಂಘದ ಅಡಿಯಲ್ಲಿ ಚುನಾವಣೆ ಸ್ಪರ್ಧಿಸಿದ್ದರೆ 1985 ರಲ್ಲಿ ಕೊನೆಯ ಬಾರಿ ಬಿಜೆಪಿ ಚಿಹ್ನೆಯಡಿ ಸ್ಪರ್ದಿಸಿದ್ದರು.
ಪ್ರದಾನಿ ಮೋದಿ ಸಂತಾಪ: