dtvkannada

ಉಪ್ಪಿನಂಗಡಿ: ಮುಸ್ಲಿಂ ಯುವಕರ ಮೇಲೆ ಸುಮಾರು 30 ಜನರ ಗುಂಪಿನಿಂದ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಜಯರಾಮ್ (21) ಹಾಗೂ ಶೋಧನ್ (21) ಎಂದು ತಿಳಿದು ಬಂದಿದೆ.

ಡಿಸೆಂಬರ್ 5ರಂದು ತಡರಾತ್ರಿ ಸುಮಾರು 30 ಜನರ ಅನ್ಯಕೋಮಿನ ಗುಂಪು ಉಪ್ಪಿನಂಗಡಿ ಸಮೀಪದ ಇಳಂತಿಲದ ಅಂಡೆತಡ್ಕ ಎಂಬಲ್ಲಿ ನಾಲ್ವರು ಮುಸ್ಲಿಂ ಯುವಕರ ಮೇಲೆ ತಳ್ವಾರ್, ಮಾರಕಾಸ್ತ್ರಗಳಿಂದ ದಾಳಿ ನಡೆಸಿತ್ತು. ಘಟನೆ ಸಂಭಂಧಿಸಿ ಅಬ್ದುಲ್ ಝಕರಿಯಾ ಎಂಬವರ ದೂರಿನ ಮೇರೆಗೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನುಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ದಾಳಿಗೊಳಗಾಗಿ ಗಂಭೀರ ಗಾಯಗೊಂಡ ಇಬ್ಬರು ಮಂಗಳೂರಿನ ಐಲ್ಯಾಂಡ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

By dtv

Leave a Reply

Your email address will not be published. Required fields are marked *

error: Content is protected !!