dtvkannada

ಮಂಗಳೂರು: ಓವರ್ ಟೇಕ್ ಮಾಡುವ ಭರದಲ್ಲಿ ಸವಾರನ ನಿಯಂತ್ರಣ ತಪ್ಪಿದ ಬೈಕ್, ರಸ್ತೆ ಬದಿಯ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಇಂದು ಬೆಳಗ್ಗೆ ಉಳ್ಳಾಲ ಮಾಸ್ತಿಕಟ್ಟೆ ಬಳಿ ಸಂಭವಿಸಿದೆ.

ಮೃತ ದುರ್ದೈವಿಯನ್ನು ಉಳ್ಳಾಲ ಮದನಿ ನಗರ ನಿವಾಸಿ ಮಹಮ್ಮದ್ ಕೈಫ್ ಎಂದು ಗುರುತಿಸಲಾಗಿದೆ.

ವೇಗವಾಗಿ ಬಂದ ದ್ವಿಚಕ್ರ ವಾಹನ ಆಟೋ ರಿಕ್ಷಾವೊಂದನ್ನು ಓವರ್ ಟೇಕ್ ಮಾಡಲು ಹೋಗಿ ರಸ್ತೆ ಬದಿ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರನ ತಲೆ ಹೊಡೆದು, ಸವಾರ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

By dtv

Leave a Reply

Your email address will not be published. Required fields are marked *

error: Content is protected !!