ಮಂಗಳೂರು: ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯಾಡಳಿತ ಕ್ಷೇತ್ರಕ್ಕೆ ಚುನಾವಣೆ ಆರಂಭಗೊಂಡಿದೆ. ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ್, ಯು.ಟಿ ಖಾದರ್ ಮೇಯರ್ ಪ್ರೇಮಾನಂದ ಶೆಟ್ಟಿ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಮತ ಚಲಾಯಿಸಲಿದ್ದಾರೆ.
![](http://dtvkannada.in/wp-content/uploads/2021/12/IMG-20211210-WA0016.jpg)
ನಂತರ ಮಾತನಾಡಿ ಸಂಸದ ನಳಿನ್ ಮಾತನಾಡಿ, ಕೋಟಾ ಶ್ರೀನಿವಾಸ ಪೂಜಾರಿ ರಾಜ್ಯದಲ್ಲೇ ಅತೀ ಹೆಚ್ಚು ಅಂತರದಲ್ಲಿ ನೇ ಬಾರಿ ಗೆಲ್ಲಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ, ಕಾಂಗ್ರೇಸ್ ನ ಮಂಜುನಾಥ ಭಂಡಾರಿ ಹಾಗೂ ಎಸ್ ಡಿಪಿಐ ನ ಶಾಫಿ.ಕೆ ಕಣದಲ್ಲಿ ಚುನಾವಣೆಗಾಗಿ ಸ್ಪರ್ಧಿಸುತ್ತಿದ್ದಾರೆ.
ದ.ಕ, ಉಡುಪಿ ಜಿಲ್ಲೆಯಲ್ಲಿ ಒಟ್ಟು 6,040 ಮತದಾರರು ಇದ್ದು, ಒಟ್ಟು 389 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ.