dtvkannada

ಬಂಟ್ವಾಳ:ವಾರಗಳ‌ ಹಿಂದೆ ಸುದ್ದಿಯಾಗಿದ್ದ ಕಾಸರಗೋಡುವಿನ ಜುವೆಲ್ಲರಿಯಿಂದ ಸುಮಾರು 2.88 ಕೋಟಿ ರೂ. ಮೌಲ್ಯದ ವಜ್ರಾಭರಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿ ಎರಡನೇ ಆರೋಪಿಯನ್ನು ಕಾಸರಗೋಡು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.



ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಇಮ್ರಾನ್ ಶಾಫಿ (36) ಬಂಧಿತ ಆರೋಪಿ, ಈತ ಪ್ರಕರಣದ ಪ್ರಮುಖ ಆರೋಪಿ ಫಾರೂಕ್ ಎಂಬಾತನ ಸಹೋದರ ಎಂದು ಪೊಲೀಸರು ತಿಳಿಸಿದ್ದಾರೆ. ಫಾರೂರ್ ತಲೆಮರೆಸಿಕೊಂಡಿದ್ದಾನೆ.
ಕಾಸರಗೋಡು ಡಿವೈಎಸ್ಪಿ ಬಾಲಕೃಷ್ಣ ನ್ ನಾಯರ್ ನೇತೃತ್ವದ ತಂಡವು ಈತನನ್ನು ಬೆಂಗಳೂರಿನಿಂದ ಬಂಧಿಸಿದ. ಆರೋಪಿಯನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು, ಬಳಿಕ ಕಸ್ಟಡಿಗೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

By dtv

Leave a Reply

Your email address will not be published. Required fields are marked *

error: Content is protected !!