dtvkannada

ಮೈಸೂರು: ಪತ್ರಕರ್ತನೊಬ್ಬನ ಮೇಲೆ ಹಲ್ಲೆ ನಡೆಸಿದ್ದ ಎನ್.ಆರ್ ಠಾಣೆಯ ಕಾನ್ಸ್‌ಟೇಬಲ್ ನನ್ನು ಅಮಾನತು ಮಾಡಲಾಗಿದೆ.



ಷಷ್ಠಿ ಹಬ್ಬದ ವರದಿ ಮಾಡಲು ತೆರಳಿದ್ದ ಸ್ಥಳೀಯ ಖಾಸಗಿ ವಾಹಿನಿಯೊಂದರ ಪತ್ರಕರ್ತನ ಮೇಲೆ ಎನ್.ಆರ್ ಠಾಣೆಯ ಕಾನ್ಸ್’ಟೇಬಲ್ ಹಲ್ಲೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಹಲ್ಲೆ ನಡೆಸಿದ್ದ ಕಾನ್ಸ್‌ಟೇಬಲ್ ಲೋಕೇಶ್ ನನ್ನು ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಕರ್ತವ್ಯ ವೇಳೆ ದುರ್ನಡತೆ ಪ್ರದರ್ಶಿಸಿದ ಆರೋಪ ಮೇಲ್ನೋಟಕ್ಕೆ ಸಾಬೀತಾಗಿರುವ ಕಾರಣ ಲೋಕೇಶ್ ನನ್ನು ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ.

By dtv

Leave a Reply

Your email address will not be published. Required fields are marked *

error: Content is protected !!