ಮಾಣಿ: ತನ್ನ ಮಗಳ ಮನೆಗೆ ಬಸ್ಸಿನಿಂದ ಇಳಿದು ರಸ್ತೆ ಬದಿಯಲ್ಲಿ ತೆರಳುತ್ತಿದ್ದ ವ್ಯಕ್ತಿಯೋರ್ವರಿಗೆ ಲಾರಿ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಮಾಣಿ ಸಮೀಪದ ಸೂರಿ ಕುಮೇರುನಲ್ಲಿ ಇದೀಗ ನಡೆದಿದೆ.
![](http://dtvkannada.in/wp-content/uploads/2021/11/img_3545.jpg)
ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಪುತ್ತೂರು ನಿವಾಸಿ ಮುಹಮ್ಮದ್ ಕುಂಞಿ ಎಂದು ಗುರುತಿಸಲಾಗಿದೆ.
ಬಸ್ಸಿನಿಂದ ಇಳಿದು ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದ್ದು ಗಂಭೀರ ಗಾಯಗೊಂಡ ಮುಹಮ್ಮದ್ ರವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಹಮ್ಮದ್ ಕುಂಞಿ ರವರು 35 ವರ್ಷಗಳಿಂದ ಪುತ್ತೂರಿನಲ್ಲಿ ಟೈಲರ್ ವೃತ್ತಿ ಮಾಡಿಕೊಂಡಿದ್ದು ಇವರು ಆರ್ಯಾಫು ಗ್ರಾಮದ ಕುಂಜೂರು ಪಂಜದ ನಿವಾಸಿಯಾಗಿದ್ದಾರೆಂದು ತಿಳಿದು ಬಂದಿದೆ.