dtvkannada

ದ.ಕ ಮತ್ತು ಉಡುಪಿ ಜಿಲ್ಲೆಗಳ ದ್ವಿಸದಸ್ಯತನಕ್ಕೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಗೆ ಮತ್ತು ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಬಂಡಾರಿ ವಿಜಯಶಾಲಿಯಾಗಿದ್ದಾರೆ.



ದ.ಕ.ಜಿಲ್ಲೆಯ 231 ಹಾಗೂ ಉಡುಪಿ ಜಿಲ್ಲೆಯ 158 ಸಹಿತ ಎರಡು ಜಿಲ್ಲೆಗಳ ಒಟ್ಟು 389 ಮತಗಟ್ಟೆಗಳಲ್ಲಿ ಒಟ್ಟ 6,040 ಮತದಾರರ ಪೈಕಿ 6,013 ಮಂದಿ ಮತದಾನವಾಗಿತ್ತು. ಇದರಲ್ಲಿ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ 3697 ಮತಗಳನ್ನು ಪಡೆದುಕೊಂಡು ಪ್ರಥಮ ಪ್ರಾಶಸ್ತ್ಯ ದಲ್ಲಿ ಗೆಲುವು ಸಾಧಿಸಿ ಮೂರನೇ ಬಾರಿಗೆ ವಿಧಾನ ಪರಿಷತ್ ಪ್ರವೇಶಿಸಿದ್ದಾರೆ.



ಕಾಂಗ್ರೆಸ್ ನ ಮಂಜುನಾಥ ಭಂಡಾರಿ 2077 ಮತಗಳನ್ನು ಪಡೆದು ದ್ವಿತೀಯ ಪ್ರಾಶಸ್ತ್ಯದಲ್ಲಿ ಗೆಲುವು ಸಾಧಿಸಿದ್ದಾರೆ. ಎಸ್.ಡಿ.ಪಿ.ಐಯ ಶಾಫಿ ಬೆಳ್ಳಾರೆ 204 ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ. ಒಟ್ಟು 56 ಮತಗಳು ಅಸಿಂಧುಗೊಂಡಿದೆ

By dtv

Leave a Reply

Your email address will not be published. Required fields are marked *

error: Content is protected !!