ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ತೋಟದ ಹೊಂಡಕ್ಕೆ ಉರುಳಿ ಬಿದ್ದ ಘಟನೆ ಡಿ.16ರಂದು ಬೆಳಿಗ್ಗೆ ಪುತ್ತೂರು ಪಾಣಾಜೆ ರಸ್ತೆಯ ಚೆಲ್ಯಡ್ಕ ಎಂಬಲ್ಲಿ ನಡೆದಿದೆ.
![](http://dtvkannada.in/wp-content/uploads/2021/12/IMG-20211216-WA0049.jpg)
ಪುತ್ತೂರು ಕಡೆಗೆ ಬರುತ್ತಿದ್ದ ಆಲ್ಟೋ-800 ಕಾರು ಉಪ್ಪಳಿಗೆ ಸಮೀಪದ ಚೆಲ್ಯಡ್ಕ ಎಂಬಲ್ಲಿ ರಸ್ತೆ ಬದಿಯ ತೋಟಕ್ಕೆ ಉರುಳಿ ಬಿದ್ದಿದೆ. ಕಾರಿನಲ್ಲಿ ಮಗು ಸಹಿತ ಐವರು ಪ್ರಯಾಣಿಸುತ್ತಿದ್ದರು. ಐವರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
![](http://dtvkannada.in/wp-content/uploads/2021/12/IMG-20211216-WA0050-1024x626.jpg)