ಪುತ್ತೂರು: ಇತ್ತೀಚೆಗೆ ಹೃದಯಾಘಾತದಿಂದ ನಿಧನರಾದ ಪುತ್ತೂರು ತಾಲೂಕಿನ ಸ್ಥಳೀಯ ಪತ್ರಿಕಾ ವರದಿಗಾರ ನಾರಾಯಣ ನಾಯ್ಕ ಅಮ್ಮುಂಜೆ ಅವರಿಗೆ ಸರಕಾರದ ವತಿಯಿಂದ ನೀಡಲಾದ 5 ಲಕ್ಷ ರೂಪಾಯಿ ಪರಿಹಾರ ಧನವನ್ನು ಪತ್ನಿ ಪೂರ್ಣಿಮಾ ಅವರಿಗೆ ಶಾಸಕ ಸಂಜೀವ ಮಠಂದೂರು ವಿತರಿಸಿದರು.
![](http://dtvkannada.in/wp-content/uploads/2021/12/IMG-20211218-WA0045-1024x576.jpg)
ಪುತ್ತೂರಿನ ಸ್ಥಳೀಯ ಪತ್ರಿಕೆಯಲ್ಲಿ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದ ನಾರಾಯಣ ನಾಯ್ಕ್ ಇತ್ತೀಚೆಗೆ ಹೃದಯಾಘಾತದಿಂದ ಮೃತಪಟ್ಟಿದ್ದು,
ತೀರಾ ಬಡತನದಿಂದ ಜೀವನ ನಿರ್ವಹಿಸುತ್ತಿರುವ ನಾರಾಯಣ ನಾಯ್ಕ್ ಅವರ ಪರಿಸ್ಥಿತಿಯ ಬಗ್ಗೆ ಅರಿತುಕೊಂಡ ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ, ರಾಜ್ಯ ಘಟಕ ಹಾಗೂ ಸ್ಥಳೀಯ ಶಾಸಕರ ಗಮನಕ್ಕೆ ತಂದ ಹಿನ್ನಲೆಯಲ್ಲಿ ಈ ಪರಿಹಾರ ದೊರೆತಿದೆ.
ಆಗಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೃತ ಪತ್ರಕರ್ತನ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡುವ ಮೂಲಕ ಕುಟುಂಬಕ್ಕೆ ಸಾಂತ್ವಾನ ನೀಡಿದ್ದಾರೆ.