ಬೆಳ್ತಂಗಡಿ : ಯುವಕನೊರ್ವ ಇದ್ದಕ್ಕಿದ್ದಂತೆ ತನ್ನ ಮನೆಯಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಳ್ತಂಗಡಿಯ ಜಾರಿಗೆ ಬೈಲ್ ನಲ್ಲಿ ನಡೆದಿದೆ. ಮೃತಪಟ್ಟ ಯುವಕ ಶಾಕಿರ್(24) ಎಂದು ತಿಳಿದು ಬಂದಿದೆ.
![](http://dtvkannada.in/wp-content/uploads/2021/12/IMG-20211223-WA0015-1.jpg)
ಇವರು ಎಂದಿನಂತೆ ಬೆಳಿಗ್ಗೆ ನಮಾಝ್ ಮಾಡಲು ಜಾರಿಗೆ ಬೈಲ್ ಮಸೀದಿಗೆ ತೆರಳಿದ್ದರು. ಮಸೀದಿಯಿಂದ ಬಂದ ಯುವಕ ತಾಯಿ ಬಳಿ ಸ್ವಲ್ಪ ಎದೆನೋವು ಇದೆ ಎಂದು ಹೇಳಿಕೊಂಡಿದ್ದರು. ಆದರೆ ವಿದಿಯಾಟ ಬೇರೆಯೇ ಆಗಿದ್ದು ತಾಯಿಯಲ್ಲಿ ನೋವಿನ ಬಗ್ಗೆ ತಿಳಿಸಿ ಒಂದಷ್ಟು ನಿಮಿಷಗಳ ಬಳಿಕ ದಿಡೀರ್ ಆಗಿ ಹೃದಯಾಘಾತ ಸಂಭವಿಸಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನೂ ಮದುವೆಯಾಗದ ಚಿರ ಯುವಕ ಮನೆಗೆ ಆಧಾರಸ್ತಂಭ ಆಗಬೇಕಾದವರಾಗಿದ್ದು ಮಗನನ್ನು ಕಳೆದುಕೊಂಡ ತಾಯಿ ಮತ್ತು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು ಯುವಕನನ್ನು ಕಳೆದುಕೊಂಡ ಊರಿನ ಜನತೆಯಂತೂ ದುಃಖತಪ್ತರಾಗಿದ್ದಾರೆ.