dtvkannada

ಪುತ್ತೂರು: ಕಳೆದ ಕೆಲವು ದಿನಗಳಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ವಿದೇಶದ ಅನಾಮಧೇಯ ಸಂಖ್ಯೆಯಿಂದ ನಿರಂತರ ಬೆದರಿಕೆ ಕರೆಗಳು, ಧಮ್ಕಿಗಳು ಬರುತ್ತಿದ್ದು. ಇದನ್ನು ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ತೀವ್ರವಾಗಿ ಖಂಡಿಸಿದ್ದಾರೆ.



ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ನಮ್ಮ ಪಕ್ಷದ ಪರ ಸಾಮಾಜಿಕ ಜಾಲತಾಣಗಳಲ್ಲಿ ಕೆಲಸ ಮಾಡುತ್ತಿರುವ ಕಾಯಕರ್ತರಿಗೆ ಕೆಲ ಕೋಮುವಾದಿ ಪಕ್ಷದ ಕಾರ್ಯಕರ್ತರಿಂದ ನಿರಂತರ ಬೆದರಿಕೆ ಮೆಸ್ಸೆಗ್‌ಗಳು ಹಾಗು ಅವರ ಮನೆಯವರಿಗೂ ಬೆದರಿಕೆ ಬರುತ್ತಿದ್ದು. ನಮ್ಮ ಯಾವುದೇ ಕಾರ್ಯಕರ್ತರ ಮೈಮುಟ್ಟಿದರೆ ನಾವು ಸುಮ್ಮನಿರುವುದಿಲ್ಲ. ಪೋಲಿಸ್ ಇಲಾಖೆ ಇಂತಹ ಬೆದರಿಕೆ ಹಾಕುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.

By dtv

Leave a Reply

Your email address will not be published. Required fields are marked *

error: Content is protected !!