';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು: ಕಾರು ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಪಾದಚಾರಿ ಮೃತಪಟ್ಟ ಘಟನೆ ಬೆಂಗಳೂರಿನ ನಾಗರಬಾವಿಯ ರಿಂಗ್ ರಸ್ತೆಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಬೇನಂ ಬರ್ಮನ್(42) ಮೃತ ದುರ್ದೈವಿ.
ಬೇನಂ ಬರ್ಮನ್ ರಸ್ತೆ ದಾಟುವಾಗ ಕಾರು ಡಿಕ್ಕಿ ಹೊಡೆದಿದೆ. ಈ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾತ್ರಿ 11ರ ಸುಮಾರಿಗೆ ಈ ಘಟನೆ ನಡೆದಿದೆ. ನಾಯಂಡನಹಳ್ಳಿಯ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಮೃತ ವ್ಯಕ್ತಿ, ಕಾಮಾಕ್ಷಿಪಾಳ್ಯದ ಸಂಬಂಧಿಕರ ಮನೆಯಿಂದ ಹಿಂತಿರುಗುವ ವೇಳೆ ದುರ್ಘಟನೆ ಸಂಭವಿಸಿದೆ.
ಅಪಘಾತದ ನಂತರ ಕಾರನ್ನ ನಿಲ್ಲಿಸದೇ ಕಾರು ಚಾಲಕ ಪರಾರಿಯಾಗಿದ್ದಾನೆ. ಸ್ಥಳೀಯರು ಹಾಗೂ ಪ್ರತ್ಯಕ್ಷದರ್ಶಿಗಳಿಂದ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>