ಬೆಳ್ತಂಗಡಿ: ಕಾರುಗಳ ಮದ್ಯೆ ಢಿಕ್ಕಿ ಹೊಡೆದ ಘಟನೆ ಬೆಳ್ತಂಗಡಿ ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ನಾರಾವಿ ಅರಸ್ ಕಟ್ಟೆ ಎಂಬಲ್ಲಿ ಇಂದು ನಡೆದಿದೆ.
![](http://dtvkannada.in/wp-content/uploads/2021/12/IMG-20211227-WA0059-768x1024.jpg)
ಬೆಳ್ತಂಗಡಿಯಿಂದ ಕಾರ್ಕಳದತ್ತ ತೆರಳುತ್ತಿದ್ದ ತೂಫಾನ್ ಕಾರು ಮತ್ತು ಅದರ ವಿರುದ್ಧ ದಿಕ್ಕಿನಲ್ಲಿ ಸಂಚರಿಸುತ್ತಿದ್ದ ಕಿಯಾ ಕಾರುಗಳ ನಡುವೆ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಸಹ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ.
![](http://dtvkannada.in/wp-content/uploads/2021/12/IMG-20211227-WA0056-1024x768.jpg)
ತೂಫಾನ್ ಕಾರು ಓವರ್ ಟೆಕ್ ಮಾಡುವ ರಭಸದಲ್ಲಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದ್ದು, ಬೆಂಗಳೂರುನತ್ತ ತೆರಳುತ್ತಿದ್ದ ಕಾರು ಎಂದು ತಿಳಿದುಬಂದಿದೆ.
![](http://dtvkannada.in/wp-content/uploads/2021/12/IMG-20211227-WA0060.jpg)
ಘಟನೆಯಿಂದ ಕೆಲವು ಸಮಯ ಟ್ರಾಫಿಕ್ ಜಾಮ್ ಉಂಟಾಗಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಟ್ರಾಫಿಕ್ ಜಾಮ್ ಮುಕ್ತಗೊಳಿಸಿದರು.