ಗುರುಪುರ: ಇಲ್ಲಿನ ಬಯಲು ಪೇಟೆ ಬಳಿ ನದಿ ತೀರದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
![](http://dtvkannada.in/wp-content/uploads/2021/12/IMG-20211228-WA0027-1024x609.jpg)
ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಮೃತದೇಹದ ಬಳಿ ಯಾರೂ ಬಾರದಿರುವಾಗ, ಅಡ್ಡೂರಿನ ಎಸ್.ಡಿ.ಪಿ.ಐ ಯುವಕರು ಆಗಮಿಸಿ ಮೃತದೇಹವನ್ನು ಅಂಬ್ಯುಲೆನ್ಸ್ ಮೂಲಕ ವೆನ್ಲಾಕ್ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಿ ಮಾನವೀಯತೆ ಮೆರೆದಿದ್ದಾರೆ.
![](http://dtvkannada.in/wp-content/uploads/2021/12/IMG-20211228-WA0028-1024x585.jpg)
ಸ್ಥಳಕ್ಕೆ ಬಜ್ಪೆ ಠಾಣಾ ಪೊಲೀಸರು ಆಗಮಿಸಿದ್ದು ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.