ಮಂಗಳೂರು: ಮಾರ್ನೆಮಿಕಟ್ಟೆಯ ಕೊರಗಜ್ಜನ ಕಟ್ಟೆಯನ್ನು ಅಪವಿತ್ರಗೊಳಿಸಿದ ಪ್ರಕರಣವನ್ನು ಪೊಲೀಸ್ ಇಲಾಖೆ ಈದೀಗ ಗಂಭೀರವಾಗಿ ಪರಿಗಣಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿ ಓರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದ್ದಾರೆ.
![](http://dtvkannada.in/wp-content/uploads/2021/12/IMG-20211229-WA0026.jpg)
ಡಿ.27ರಂದು ರಾತ್ರಿ 11.40ರ ಸುಮಾರಿಗೆ ಕೊರಗಜ್ಜನ ಕಟ್ಟೆಯ ಮೇಲೆ ಉಪಯೋಗಿಸಿದ ಕಾಂಡೋಮ್ ಹಾಕಿ ಅಪವಿತ್ರಗೊಳಿಸಿದ್ದರು.
ಈ ವೇಳೆ ಸುತ್ತಮುತ್ತಲಿದ್ದ ಸಿಸಿಟಿವಿಯನ್ನು ಪಾಂಡೇಶ್ವರ ಪೊಲೀಸರು ವಶಕ್ಕೆ ಪಡೆದಿದ್ದರು. ಅದರ ಆಧಾರದ ಮೇಲೆ ಶಂಕಿತ ಆರೋಪಿ ದೇವದಾಸ್ ದೇಸಾಯ್ ಯನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ಮುಂದುವರೆದಿದೆ.