ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ದೇವರಗದ್ದೆಯ ಬಳಿ ಇರುವ ಬಾವಿಯಲ್ಲಿ ವ್ಯಕ್ತಿಯೋರ್ವನ ಶವವೊಂದು ಪತ್ತೆಯಾಗಿದೆ.
![](http://dtvkannada.in/wp-content/uploads/2021/12/IMG-20211230-WA0043.jpg)
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಮನೋಹರ ಪ್ರಭು (48) ಎಂದು ಗುರುತಿಸಲಾಗಿದೆ.
ಇಂದು ಬೆಳಗ್ಗೆ ಬಾವಿ ಬಳಿ ಸ್ಕೂಟರ್ ಹಾಗೂ ಚಪ್ಪಲಿ ಪತ್ತೆಯಾದ ಹಿನ್ನೆಲೆಯಲ್ಲಿ ಅನುಮಾನದ ಮೇಲೆ ಮನೋಹರ ಪ್ರಭುರನ್ನು ಹುಡುಕಾಟ ನಡೆಸಿದ್ದರು.
![](http://dtvkannada.in/wp-content/uploads/2021/12/IMG-20211230-WA0042.jpg)
ಇದೇ ವೇಳೆ ಪಕ್ಕದಲ್ಲಿದ್ದ ದೇವರ ಗದ್ದೆಯ ಬಾವಿಯಲ್ಲಿ ಶವ ಪತ್ತೆಯಾಗಿದೆ. ಸದ್ಯ ಅಗ್ನಿಶಾಮಕ ದಳ ತಂಡ ಬಾವಿಯಿಂದ ಶವವನ್ನು ಮೇಲಕ್ಕೆತ್ತಿದ್ದು, ಪ್ರಕರಣ ದಾಖಲಾಗಿದೆ. ಆತ್ಮಹತ್ಯೆ ಎಂದು ಮೇಲ್ನೊಟಕ್ಕೆ ಕಂಡುಬಂದಿದ್ದು, ಘಟನೆಗೆ ನಿಖರವಾದ ಕಾರಣವೇನೆಂದು ತಿಳಿದುಬಂದಿಲ್ಲ.ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಮುಂದಿನ ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.