dtvkannada

ಕುಂದಾಪುರ: ಸಾಲ ಮರುಪಾವತಿ ಮಾಡಲಾಗದೆ ನೊಂದ ಯುವಕನೊಬ್ಬ ಡೆತ್ ನೋಟ್ ಬರೆದಿಟ್ಟು ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಕುಂದಾಪುರದ ಹೆಮ್ಮಾಡಿಯಲ್ಲಿ ನಡೆದಿದೆ.

ಮೃತ ಯುವಕನನ್ನು ಕುಂದಾಪುರದ ಹೆಮ್ಮಾಡಿಯ ವಿಘ್ನೇಶ್ ಎಂದು ಗುರುತಿಸಲಾಗಿದೆ. ಮೊಬೈಲ್ App ಮೂಲಕ ಸಾಲ ಮಾಡಿದ್ದ ವಿಘ್ನೇಶ್ ಸಾಲ ಮರುಪಾವತಿ ಮಾಡಲಾಗದೇ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಮನೆಯ ಮುಂಭಾಗದಲ್ಲಿರುವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ವಿಘ್ನೇಶ್, ಬಹುರಾಷ್ಟ್ರೀಯ ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ.

ಸ್ನೇಹಿತರ ಜೊತೆಗೆ ಸೇರಿ ಬಿಸಿನೆಸ್ ಆರಂಭಿಸಲು ಮೊಬೈಲ್ ಆಪ್ ನಲ್ಲಿ ಸಾಲ ಮಾಡಿದ್ದ ವಿಘ್ನೇಶ್, ಸಾಲ ತೀರಿಸಲಾಗದೇ ಆತ್ಮಹತ್ಯೆಯ ನಿರ್ಧಾರ ಕೈಗೊಂಡಿರುವುದು ಡೆತ್ ನೋಟ್ ನಲ್ಲಿ ಬೆಳಕಿಗೆ ಬಂದಿದೆ.
ಡೆತ್ ನೋಟ್ ನಲ್ಲಿ ಎಟಿಎಂ ಪಾಸ್ವರ್ಡ್ ಬರೆದಿರುವ ಯುವಕ, ಲೋನ್ ಬಾಕಿ ಇದೆ ಎಂದು ಕರೆ ಬಂದ್ರೆ ನಾನು ಸತ್ತು ಹೋಗಿದ್ದೇನೆ ಎಂದು ಹೇಳಿ ಎಂದು ಬರೆದಿದ್ದಾರೆ. ಸದ್ಯ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

By dtv

Leave a Reply

Your email address will not be published. Required fields are marked *

error: Content is protected !!