dtvkannada

ಸುಳ್ಯ: ಇಲ್ಲಿನ ಹಾಸ್ಟೆಲ್ ನಲ್ಲಿ ಬಾಡಿಗೆದಾರರೊಬ್ಬರು ತಮ್ಮ ಕೋಣೆಯಲ್ಲಿ ಸಂಗ್ರಹಿಸಿಟ್ಟಿದ್ದ 11 ಕೆ.ಜಿ ಗಾಂಜಾವನ್ನು ಸುಳ್ಯ ಮತ್ತು ಪುತ್ತೂರು ಅಬಕಾರಿ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ.



ಮೊಯ್ದಿನ್ ಕುಂಞಿ ಎಂಬುವವರು ಅಂಬಟೆಡ್ಕದ ಬೆನಕ ಹಾಸ್ಟೆಲ್ ನಲ್ಲಿ ಕೊಠಡಿ ಬಾಡಿಗೆ ಪಡೆದು ತನ್ನ ಕುಟುಂಬದೊಂದಿಗೆ ಆಶ್ರಯ ಹೂಡಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ.

ಇಲ್ಲಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಪಡೆದ ಪುತ್ತೂರು ಅಬಕಾರಿ ಇಲಾಖೆಯವರು ಸುಳ್ಯ ಅಬಕಾರಿ ಇಲಾಖೆಯವರೊಂದಿಗೆ ಸೇರಿ ಜಂಟಿ ಕಾರ್ಯಾಚರಣೆ ನಡೆಸಿದರು. ತಪಾಸಣೆ ಮಾಡುವ ವೇಳೆ 11 ಕೆ.ಜಿ. ಗಾಂಜಾ ಪತ್ತೆಯಾಗಿದೆ.



ಈ ವೇಳೆ ಮನೆಯೊಳಗಿದ್ದ ಮೊಯ್ದಿನ್ ಕುಂಞಿ ಪರಾರಿಯಾಗಿದ್ದು, ಸಲಾಹುದ್ದೀನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮೊಯ್ದೀನ್ ಕುಂಞಿಯ ಕಾರನ್ನು ಕೂಡಾ ವಶಕ್ಕೆ ಪಡೆದಿದ್ದು ಅದರಲ್ಲಿ ಕೂಡಾ 1 1 ಕೆ.ಜಿ. ಗಾಂಜಾ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಅಬಕಾರಿ ಉಪಾಧೀಕ್ಷಕ ಶಿವಪ್ರಸಾದ್, ಅಬಕಾರಿ ನಿರೀಕ್ಷಕ ಸುಬ್ರಹ್ಮಣ್ಯ ಪೈ, ಸುಳ್ಯ ಅಬಕಾರಿ ನಿರೀಕ್ಷಕಿ ರಾಧಾ, ಸಿಬ್ಬಂದಿ ವಿಜಯಕುಮಾರ್, ಪ್ರೇಮಾನಂದ, ಯಲ್ಲಪ್ಪ, ಪ್ರಶಾಂತ್, ಶರಣಪ್ಪ, ಅಮರೇಶ್, ಅಶೋಕ್, ಶರತ್, ತಿಪ್ಪೇಸ್ವಾಮಿ, ನೀಲಾಧರ ಮತ್ತಿತರರು ಕಾರ್ಯಾಚರಣೆ ನಡೆಸಿದರು.

By dtv

Leave a Reply

Your email address will not be published. Required fields are marked *

error: Content is protected !!