dtvkannada

ವಿಟ್ಲ: SSLC ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಅಳಿಕೆಯಲ್ಲಿ ನಡೆದಿದೆ.



ಅಳಿಕೆ ಗ್ರಾಮದ ನೆಕ್ಕಿತಪುಣಿ ನಿವಾಸಿ ಸವರ್‌ ಡಿಸೋಜ ರವರ ಪುತ್ರ ಸಂದೀಪ್‌ ಅನಿಸಿತ್‌ ಡಿಸೋಜ(15 ವ) ಆತ್ಮಹತ್ಯೆ ಮಾಡಿಕೊಂಡ ಬಾಲಕ.

ಹತ್ತನೇ ತರಗತಿಯಲ್ಲಿ ಕಲಿಯುತ್ತಿದ್ದ ಸಂದೀಪ್ ಜ.3ರಂದು ರಾತ್ರಿ ಕೋಣೆಯಲ್ಲಿ ಮಲಗಿದ್ದು ಬೆಳಗ್ಗೆ ಮನೆಯವರು ನೋಡುವ ವೇಳೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕೆ ವಿಟ್ಲ ಪೊಲೀಸ್‌ ಠಾಣಾ ಸಿಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

By dtv

Leave a Reply

Your email address will not be published. Required fields are marked *

error: Content is protected !!