ಪುತ್ತೂರು: ಪುತ್ತೂರು ತಾಲೂಕಿನ ಸಂಪ್ಯದಲ್ಲಿ ಅಂತ್ಯವಿಶ್ರಾಂತಿ ಹೊಂದುತ್ತಿರುವ ವಲಿಯವರ ಹೆದರಿನಲ್ಲಿ ನಡೆಸಿಕೊಂಡು ಬರುತ್ತಿರುವ ಸಂಪ್ಯ ಮಖಾಂ ಉರೂಸ್ ದಿನಾಂಕ 9ರ ಬದಲಾಗಿ ಕರ್ಫ್ಯೂ ಕಾರಣ ಇಂದು ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
![](http://dtvkannada.in/wp-content/uploads/2022/01/IMG-20220107-WA0075-1024x618.jpg)
ತಿಂಗಳುಗಳ ಹಿಂದೆಯೇ ದಿನಾಂಕ ನಿಗದಿಯಾಗಿದ್ದು ಕಾರ್ಯಕ್ರಮ ಆರಂಭಗೊಂಡಿತ್ತು. ಅದರಂತೆ ಆದಿತ್ಯವಾರದಂದು ಉರೂಸ್ ಸಮಾರೋಪ ಸಮಾರಂಭ ನಡೆಯಬೇಕಿತ್ತು. ಆದರೆ ಸರಕಾರ ದಿಡೀರ್ ವಾರಾಂತ್ಯ ಕರ್ಫ್ಯೂ ಘೋಷಣೆ ಮಾಡಿರುವ ಕಾರಣ ನಾಳೆ (ಶುಕ್ರವಾರ) ಉರೂಸನ್ನು ಸಮಾಪ್ತಿಗೊಳಿಸಲಾಗುವುದೆಂದು ಸಂಘಟಕರು ತಿಳಿಸಿದ್ದಾರೆ.