ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕೋವಿಡ್ ವಾರಿಯರ್ ಕರ್ನಾಟಕದ ಬಾಹುಬಲಿ ಖ್ಯಾತಿಯ ಲಯನ್ಸ್ ಡಾ! ಇ.ಕೆ.ಎ. ಸಿದ್ದೀಕ್ ಅಡ್ಡೂರು ರವರಿಗೆ ಕೊಡಗು ಬ್ಲಡ್ ಡೋನರ್ಸ್(ರಿ) ಕೊಡಗು ವತಿಯಿಂದ ಮಡಿಕೇರಿಯಲ್ಲಿ ಇಂದು ಸನ್ಮಾನಿಸಲಾಯಿತು.
![](http://dtvkannada.in/wp-content/uploads/2022/01/IMG-20220109-WA0081-1024x576.jpg)
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಬ್ಲಡ್ ಡೋನರ್ಸ್ (ರಿ) ಅಧ್ಯಕ್ಷರಾದ ಖಲೀಲ್ ವಹಿಸಿದ್ದರು.
ಸನ್ಮಾನಿತ ಡಾ. ಇ.ಕೆ.ಎ.ಸಿದ್ದೀಕ್ ಅಡ್ಡೂರು ಮಾತನಾಡಿ ಸಮಾಜದಲ್ಲಿ ಅದೆಷ್ಟೋ ಬಡ ರೋಗಿಗಳಿಗೆ ತುರ್ತು ರಕ್ತ ಪೂರೈಸುವಲ್ಲಿ ಕೊಡಗು ಬ್ಲಡ್ ಡೋನರ್ಸ್ ಯಶಸ್ವಿಯಾಗಿದೆ. ನಿಮ್ಮ ಈ ಒಂದು ಮಹತ್ತರವಾದ ಕಾರ್ಯವೂ ಇನ್ನಷ್ಟು ಮುಂದುವರಿಯಲಿ ಎಂದು ಶುಭ ಹಾರೈಸಿದರು. ಕೋವಿಡ್ ಸಂದಿಗ್ಧ ಪರಿಸ್ಥಿತಿಯಲ್ಲಿ ತಾನು ಮಾಡಿದ ಸೇವೆಯನ್ನು ಗುರುತಿಸಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನೀಡುವ ಗೌರವ ಪ್ರಶಸ್ತಿಯನ್ನು ನಾಳೆ ಮಡಿಕೇರಿಯ ಕಾವೇರಿ ಸಭಾಂಗಣದಲ್ಲಿ ಸ್ವೀಕರಿಸಲಿದ್ದೇನೆ ಎಂದರು.
![](http://dtvkannada.in/wp-content/uploads/2022/01/IMG-20220109-WA0086-1024x576.jpg)
![](http://dtvkannada.in/wp-content/uploads/2022/01/IMG-20220109-WA0084.jpg)
ತನ್ನನ್ನು ಗುರುತಿಸಿ ಸನ್ಮಾನಿಸಿದ ಕೊಡಗು ಬ್ಲಡ್ ಡೋನರ್ಸ್ (ರಿ) ತಂಡಕ್ಕೆ ಧನ್ಯವಾದ ಸಮರ್ಪಿಸಿದರು.
![](http://dtvkannada.in/wp-content/uploads/2022/01/IMG-20220109-WA0088.jpg)
ಕಾರ್ಯಕ್ರಮದಲ್ಲಿ ಕೊಡಗು ಬ್ಲಡ್ ಡೋನರ್ಸ್ ಉಪಾಧ್ಯಕ್ಷರಾದ ಮೈಕಲ್ ವೇಗಸ್, ಕಾರ್ಯದರ್ಶಿಯಾದ ಮನ್ಸೂರ್ ಮತ್ತು ಪದಾಧಿಕಾರಿಗಳಾದ ಅಶ್ರಫ್, ಬಶೀರ್ ಮೊದಲಾದವರು ಉಪಸ್ಥಿತರಿದ್ದರು.