ಪುತ್ತೂರು: ತಾಯಿ ದೇವರ ಸ್ವರೂಪ ಅಂತಾರೆ. ಆದರೆ ಇಲ್ಲೊಬ್ಬ ಪಾಪಿ ಮಗ ಹೆತ್ತು, ಹೊತ್ತು ಸಾಕಿದ ತಾಯಿಯನ್ನೇ ಬಲವಂತವಾಗಿಸಿ ಅತ್ಯಾಚಾರಗೈದು ವಿಕೃತಿ ಮೆರೆದ ಘಟನೆ ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಕುರಿಕ್ಕಾರದಲ್ಲಿ ನಡೆದಿದೆ. ಸಂತ್ರಸ್ತ ಮಹಿಳೆ ನೀಡಿದ ದೂರಿನಂತೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಆರೋಪಿ ಮಗನ ವಿರುದ್ಧ ಪ್ರಕರಣ ದಾಖಲಾಗಿದೆ.
![](http://dtvkannada.in/wp-content/uploads/2022/01/ccf8c758-49ec-4526-bbfb-1dcae2fc3466.jpg)
ಕೆದಂಬಾಡಿ ಕುರಿಕ್ಕಾರದ ಜಯರಾಮ ರೈ ಅತ್ಯಾಚಾರ ಎಸಗಿರುವ ಆರೋಪಿ. 58 ವರ್ಷ ಪ್ರಾಯದ ತನ್ನ ತಾಯಿಯೊಂದಿಗೆ ವಾಸವಾಗಿರುವ ಜಯರಾಮ ಜ.12ರಂದು ಎಂದಿನಂತೆ ರಾತ್ರಿ ಊಟ ಮಾಡಿ ಅವರ ರೂಮ್ ನಲ್ಲಿ ಮಲಗಿದ್ದ. ಮುಂಜಾನೆ 3 ಗಂಟೆಯ ವೇಳೆಗೆ ತಾಯಿ ಮಲಗಿದ್ದ ರೂಮ್ ಗೆ ಹೋಗಿ ಜಯರಾಮ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ತಾಯಿ ಆತನನ್ನು ತಳ್ಳಿ ಬೊಬ್ಬೆ ಹಾಕಿದಾಗ ಆತ ತಾಯಿಯ ಬಾಯಿಯನ್ನು , ಬಟ್ಟೆಯಿಂದ ಒತ್ತಿ ಹಿಡಿದು ಬೊಬ್ಬೆ ಹಾಕದಂತೆ ಬೆದರಿಕೆ ಹಾಕಿ ತಾಯಿ ಪ್ರತಿಭಟಿಸಿದರೂ ಬಲವಂತವಾಗಿ ಅತ್ಯಾಚಾರ ಮಾಡಿದ್ದಾನೆ. ಈ ವಿಚಾರವನ್ನು ಯಾರಲ್ಲಾದರೂ ತಿಳಿಸಿದರೆ ಕೊಂದು ಬಿಡುವುದಾಗಿ ಬೆದರಿಕೆ ಹಾಕಿದ್ದಾನೆ. ಇದಾದ ಬಳಿಕ ಜ.13ರಂದು ಬೆಳಿಗ್ಗೆ 07.45ಕ್ಕೆ ತಾಯಿ ಅಡುಗೆ ಕೋಣೆಯಲ್ಲಿದ್ದ ಸಂದರ್ಭದಲ್ಲಿ ಅಲ್ಲಿಗೆ ಬಂದ ಜಯರಾಮ ಬಲವಂತದಿಂದ ಅವರನ್ನು ಮನೆಯ ಹಾಲ್ಗೆ ಎಳೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ ಎಂದು ಕೇಸು ದಾಖಲಿಸಲಾಗಿದೆ.
ಮಗನ ಕೃತ್ಯದಿಂದ ಅಸ್ವಸ್ಥಗೊಂಡಿರುವ ಮಹಿಳೆ ಮಧ್ಯಾಹ್ನ 1 ಗಂಟೆಗೆ ಪುತ್ತೂರು ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಬಂದಾಗ ವೈದ್ಯರು ಪರೀಕ್ಷಿಸಿ, ಒಳರೋಗಿಯಾಗಿ ದಾಖಲಿಸಿಕೊಂಡಿದ್ದಾರೆ. ಬಲವಂತವಾಗಿ ಅತ್ಯಾಚಾರ ನಡೆಸಿ, ಜೀವ ಬೆದರಿಕೆ ಒಡ್ಡಿದ ಮಗ ಜಯರಾಮನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮಹಿಳೆ ದೂರು ನೀಡಿದ್ದಾರೆ. ದೂರು ಸ್ವೀಕರಿಸಿಕೊಂಡಿರುವ ಪೊಲೀಸರು ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 376(2)(n)506 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಹೆತ್ತ ತಾಯಿಯನ್ನೇ ಅತ್ಯಾಚಾರ ಗೈದ ನೀಚ ಅರೋಪಿಗೆ ಗಲ್ಲು ಶಿಕ್ಷೆ ನೀಡುವಂತೆ ಕುಂಬ್ರದಲ್ಲಿ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಹೆತ್ತ ತಾಯಿಯನ್ನೇ ಅತ್ಯಾಚಾರ ಗೈದ ಅರೋಪಿಯನ್ನು ಯಾವುದೇ ಕಾರಣಕ್ಕೂ ಬೀಡಬಾರದು ಯಾಕಂದರೆ ಆತ ಇರುವ ಕಡೆ ನಡೆದಾಡುವ ಕಡೆ ಸುತ್ತ ಮುತ್ತ ಹೆಣ್ಣು ಮಕ್ಕಳಿದ್ದು ತಾಯಿಯನ್ನೇ ಈ ರೀತಿಯಾಗಿ ನಡೆಸಿಕೊಂಡವನು ನಮ್ಮ ಹೆಣ್ಣು ಮಕ್ಕಳನ್ನು ಏನು ಮಾಡಿಯಾನು ಎಂದು ಆಕ್ರೋಶ ವ್ಯಕ್ತ ಪಡಿಸುತ್ತಾ ಆರೋಪಿಗೆ ತಕ್ಷಣ ಗಲ್ಲು ಶಿಕ್ಷೆ ನೀಡಲು ಕುಂಬ್ರದಲ್ಲಿ ಸಾರ್ವಜನಿಕರು ಅಭಿಪ್ರಾಯವನ್ನು ವ್ಯಕ್ತಪಡಿಸಿದರು
ಸಂಬಂಧಗಳ ಅರಿವೇ ಇಲ್ಲದ ಪಾಪಿ ಮಗ ತನ್ನ ತಾಯಿಯ ಮೇಲೆಯೇ ಅಮಾನವೀಯ ಕೃತ್ಯ ಎಸಗಿ ಊರವರು ತಲೆತಗ್ಗಿಸುವಂತಾಗಿದೆ.