ಪುತ್ತೂರು: ಕಾರು ಮತ್ತು ಲಾರಿ ನಜುವೆ ಭೀಕರ ಅಪಘಾತ ಸಂಭವಿಸಿದ ದುರ್ಘಟನೆ ಹಾಸನ ಸಮೀಪದ ಚೆನ್ನರಾಯಪಟ್ಟಣದಲ್ಲಿ ಜನವರಿ 14ರ ಬೆಳಗ್ಗೆ ನಡೆದಿದೆ. ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಈಶ್ವರಮಂಗಲ ಹಾಗೂ ವಿಟ್ಲದ ಈರ್ವರು ಮೃತಪಟ್ಟಿದ್ದಾರೆ.
ಬೆಂಗಳೂರಿನಿಂದ ಊರಿಗೆ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
![](http://dtvkannada.in/wp-content/uploads/2022/01/IMG-20220114-WA0030-1024x573.jpg)
ಈಶ್ವರಮಂಗಲ ಸಮೀಪದ ಬಂಟುಕಲ್ಲು ನಿವಾಸಿ ಬೆಂಗಳೂರಿನ ಇನ್ಫೋಸಿಸ್ ನಲ್ಲಿ ಉದ್ಯೋಗಿಯಾಗಿದ್ದ ದೇವಿಪ್ರಸಾದ್ ಶೆಟ್ಟಿ ಮತ್ತು ವಿಟ್ಲ ಕೊಳ್ನಾಡು ಗ್ರಾಮದ ಕೆಳಗಿನ ಬಾರೆಬೆಟ್ಟು ನಿವಾಸಿ ದಿ.ಚಂದ್ರಶೇಖರ ಕುಲಾಲ್ ರವರ ಪುತ್ರ ಮುಡಿಪು ಇನ್ಫೋಸಿಸ್ ಉದ್ಯೋಗಿಯಾಗಿದ್ದ ಸುದರ್ಶನ್(32 ವ) ಮೃತಪಟ್ಟವರು ಎಂದು ತಿಳಿದು ಬಂದಿದೆ.