ಬೆಳ್ತಂಗಡಿ: ಗುರುವಾಯನಕೆರೆ ಬಳಿ ಲಾರಿ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಇಬ್ಬರು ಯುವಕರು ಸ್ಥಳದಲ್ಲೆ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.
ಮೃತ ಯುವಕರು ಅಜಿಲಮೊಗರು ದರ್ಗಾ ಉರೂಸಿಗೆ ತೆರಳಿ ವಾಪಾಸಾಗುತ್ತಿದ್ದಾಗ ಈ ದುರ್ಘಟನೆ ನಡೆದಿದೆಯೆಂದು ತಿಳಿದು ಬಂದಿದೆ.
ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಲಾರಿ ಡಿಕ್ಕಿಯಾಗಿದ್ದು ಮೃತಪಟ್ಟ ಬಾಲಕರು ಅಶ್ಪ ಮತ್ತು ನಿಶ್ಪ ಎಂಬ ಯುವಕರಾಗಿದ್ದು ಇವರು ಗುರುವಾಯನಕೆರೆ ಮತ್ತು ನಾವೂರಿನವರೆಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.