dtvkannada

ಸುಳ್ಯ: ಟಿಪ್ಪರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಾಯಗೊಂಡ ಘಟನೆ ಇಲ್ಲಿನ ಸೋಣಂಗೇರಿ ಸಮೀಪದ ಸುತ್ತುಕೋಟೆ ಬಳಿ ನಿನ್ನೆ ನಡೆದಿದೆ.



ದ್ವಿಚಕ್ರ ವಾಹನದಲ್ಲಿ ಯತೀನ್ ಎಂಬುವವರು ದುಗ್ಗಲಡ್ಕದಿಂದ ಸುಳ್ಯದ ಕಡೆಗೆ ಬರುತ್ತಿದ್ದರು.

ಸುಳ್ಯ ಕಡೆಯಿಂದ ಹೋಗುತ್ತಿದ್ದ ಟಿಪ್ಪರ್‌ಗೆ ಸೋಣಂಗೇರಿ ಸಮೀಪದ ಸುತ್ತುಕೋಟೆ ತಿರುವಿನಲ್ಲಿ ಮುಖಾಮುಖಿ ಡಿಕ್ಕಿಯಾಗಿದ್ದು ಡಿಕ್ಕಿಯ ರಭಸಕ್ಕೆ ಯತೀನ್ ರವರ ಎಡ ಕೈ ಜಖಂಗೊಂಡು,ತಲೆ ಮತ್ತು ಮುಖದ ಭಾಗಕ್ಕೆ ಸ್ವಲ್ಪ ಗಾಯವಾಗಿದೆ ತಿಳಿದುಬಂದಿದೆ. ಬೈಕ್ ಕೂಡ ಜಖಂಗೊಂಡಿದ್ದು ಗಾಯಾಳುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

By dtv

Leave a Reply

Your email address will not be published. Required fields are marked *

error: Content is protected !!