ಬೆಳಗಾವಿ : ಬೀದಿ ಬದಿಯ ನಾಯಿಗಳ ಕ್ರೌರ್ಯಕ್ಕೆ ನಾಲ್ಕು ವರ್ಷದ ಪುಟ್ಟ ಬಾಲಕಿ ಬಲಿಯಾಗಿದ್ದಾಳೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳವಾಡ ಗ್ರಾಮದಲ್ಲಿ ನೋವಿನ ಘಟನೆ ನಡೆದಿದೆ.
![](http://dtvkannada.in/wp-content/uploads/2022/01/IMG-20220120-WA0042-1024x576.jpg)
ಸೌಜನ್ಯ ಮಲ್ಲಪ್ಪ ಮುತ್ತೂರ ಎಂಬ ನಾಲ್ಕು ವರ್ಷದ ಬಾಲಕಿಯೇ ಬೀದಿ ಬದಿ ನಾಯಿಗಳ ದಾಳಿಗೆ ಬಲಿಯಾಗಿರುವ ನತದೃಷ್ಟೆಯಾಗಿದ್ದಾಳೆ.
ದಾಳಿಯಿಂದ ತೀವ್ರ ಗಾಯಗೊಂಡಿದ್ದ ಮಗುವನ್ನು ಅಥಣಿ ಸಮುದಾಯ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗದಲ್ಲಿ ಸಾವನ್ನಪ್ಪಿದ್ದಾಳೆ,
ಮಗು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದ್ದು ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆಂದು ತಿಳಿದು ಬಂದಿದೆ.