ಉಪ್ಪಿನಂಗಡಿ: ಲಾಡ್ಜ್ ನಲ್ಲಿ ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರು ಘಟನೆ ನಡೆದಿದೆ.
![](http://dtvkannada.in/wp-content/uploads/2022/01/IMG-20220126-WA0049.jpg)
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಮಹಮ್ಮದ್ ಶರೀಪ್ (37) ತಿಳಿದಿದ್ದು ಇವರು ಮೂಲತಃ ವಿಟ್ಲ ಮುಡ್ನೂರು ನಿವಾಸಿ ಎಂದು ತಿಳಿದು ಬಂದಿದೆ. ಮೃತ ವ್ಯಕ್ತಿ ಮದ್ಯಪಾನ ಸೇವಿಸಿದ್ದ ಎಂದು ತಿಳಿದು ಬಂದಿದೆ.
ಈ ವ್ಯಕ್ತಿ ನಿನ್ನೆ ಉಪ್ಪಿನಂಗಡಿ ಲಾಡ್ಜ್ ನಲ್ಲಿ ರೂಂ ಪಡೆದಿದ್ದರು. ಇಂದು ರೂಂ ಚೆಕ್ ಔಟ್ ಮಾಡಬೇಕಿತ್ತು. ಅದರೆ ಅವರ ರೂಂ ಇನ್ನೂ ತೆರೆಯದ ಕಾರಣ ಲಾಡ್ಜ್ ಸಿಬ್ಬಂದಿಗಳು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ತಿಳಿದು ಬಂದಿದೆ.ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆಂದು ತಿಳಿದುಬಂದಿದೆ.