ಮೈಸೂರು: ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ದಂಪತಿಗಳು ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ಉದಯಗಿರಿಯ ಸಾತಗಳ್ಳಿ ಲೇಔಟ್ ನಲ್ಲಿ ನಡೆದಿದೆ.
![](http://dtvkannada.in/wp-content/uploads/2022/01/IMG-20220126-WA0062.jpg)
ಸಾತಗಳ್ಳಿ ಲೇಔಟ್ ನ ದಂಪತಿಗಳಾದ ಸಂತೋಷ (26), ಭವ್ಯ (22) ಮೃತ ದುರ್ದೈವಿಗಳು ಎನ್ನಲಾಗಿದೆ.
ಕಳೆದ ಕೆಲವು ದಿನಗಳಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ದಂಪತಿಗಳು ಸಾಲಕ್ಕೆ ಹೆದರಿ ಊಟಕ್ಕೆ ವಿಷ ಬೆರೆಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಈ ಕುರಿತು ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಉದಯಗಿರಿ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.